ನಕ್ಸಲರ ಶರಣಾಗತಿ ಪ್ರಹಸನವೇ ಅನುಮಾನಾಸ್ಪದ
ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ
ಬೆಂಗಳೂರು: ಶರಣಾಗತರಾಗುತ್ತಿರುವ 6 ಮಂದಿ ನಕ್ಸಲರಿಗೆ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ? ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ - ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ! ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿ ಆಗಿದ್ದ ತಣ್ಣಗಿನ ಮಲೆನಾಡಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದಿದ್ದಾರೆ.