For the best experience, open
https://m.samyuktakarnataka.in
on your mobile browser.

ಮೈಸೂರು ದರಸಾಕ್ಕಿಂತ ಅತೀ ವಿಜೃಂಭಣೆಯಿಂದ ಕಾಂಗ್ರೆಸ್ ಶತಮಾನೋತ್ಸವ

09:36 PM Dec 13, 2024 IST | Samyukta Karnataka
ಮೈಸೂರು ದರಸಾಕ್ಕಿಂತ ಅತೀ ವಿಜೃಂಭಣೆಯಿಂದ ಕಾಂಗ್ರೆಸ್ ಶತಮಾನೋತ್ಸವ

ಬೆಳಗಾವಿ: ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಮೈಸೂರು ದರಸಾಕ್ಕಿಂತ ಅತೀ ವಿಜೃಂಭಣೆಯಿಂದ ಬೆಳಗಾವಿಯಲ್ಲಿ ಆಚರಣೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ‌ ಶಿವಕುಮಾರ್ ಹೇಳಿದರು.

ಇಲ್ಲಿನ ಕಾಂಗ್ರೆಸ್ ‌ಕಚೇರಿಯಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ 1924ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಮಾಡಲಾಗುತ್ತಿದೆ. ಕಾಂಗ್ರೆಸ್  ಪಕ್ಷದ ಐತಿಹಾಸಿಕ ಸ್ಥಳವಾಗಿರುವ ವೀರಸೌದದಿಂದ 2028 ಚುನಾವಣಾ ರಣಕಹಳೆ ಮೊಳಗಿಸಲಾವುದು ಎಂದು ಹೇಳಿದರು.

ಇಲ್ಲಿನ ಸಿಪಿಎಡ್ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಡಿ. 26 ಮತ್ತು 27 ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಸಂಸದರು ಹಾಗೂ ಕಾರ್ಯಕಾರಣಿ ಸದಸ್ಯರು ಭಾಗವಹಿಸುವ ನಿರೀಕ್ಷೆಯಿದೆ.

ಶತಮಾನೋತ್ಸವವನ್ನು ಮೆಲುಕು ಹಾಕಲು, ಎರಡು ದಿನಗಳ ಕಾಲ ಬೆಳಗಾವಿ ನಗರ ಹಬ್ಬದ ವಾತಾವರಣದಿಂದ ಮುಗಿಯಲಿದೆ. ಈ ಕಾರ್ಯಕ್ರಮದ ಮೂಲಕ ಕಾಂಗ್ರೆಸ್ ಪಕ್ಷ ತನ್ನ ಐತಿಹಾಸಿಕ ಪಯಣವನ್ನು ಸ್ಮರಿಸಿ ಭವಿಷ್ಯದ ಕಾರ್ಯಯೋಜನೆಗಳನ್ನು ರೂಪಿಸಲು ತಯಾರಾಗುತ್ತಿದೆ.

ಅದ್ಧೂರಿ ಕಾರ್ಯಕ್ರಮದ : ಶತಮಾನೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಭಾಗವಹಿಸುವ ಮೂಲಕ ಅದ್ದೂರಿ ಸಮಾರಂಭದ ಸಿದ್ಧತೆಗಳು ನಡೆಯುತ್ತಿವೆ. ಬೆಳಗಾವಿಯ ಜನತೆ ಈ ಮಹತ್ವದ ಕ್ಷಣವನ್ನು ಸ್ಮರಿಸುವಂತೆ ಶತಮಾನೋತ್ಸವ ಆಯೋಜನೆಯು ಸಾಂಸ್ಕೃತಿಕ ಹಾಗೂ ರಾಜಕೀಯ ತಳಹದಿಯನ್ನು ಬಲಪಡಿಸಲಿದೆ ಎಂದರು.

ರಾಜ್ಯದಲ್ಲಿ 2028 ರಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಇಲ್ಲಿಂದಲೇ ಚುನಾವಣಾ ಅಬ್ಬರ ಶುರುವಾಗಲಿದೆ.
ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಎಲರೂ ಐತಿಹಾಸಿಕ ಕಾರ್ಯಕ್ರಮ ನೋಡಿ ಕಂಣ್ತಿಕೊಳ್ಳಬೇಕು.ಯಾವುದೇ ಸಮಸ್ಯೆ ಆಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗುದು.

ದೇಶಕ್ಕೆ ಸ್ವಾತಂತ್ರ್ಯ ತಂದಕೊಟ್ಟ ಕಾಂಗ್ರೆಸ್ ಸ್ವಾಭಿಮಾನದ ಕಿಚ್ಚು ಇಲ್ಲಿಂದಲೇ ಮೊಳಗಿಸಬೇಕು.
ಕಾಂಗ್ರೆಸ್ ಕಾರ್ಯಕರ್ತರು ಭವಿಷ್ಯಕ್ಕಾಗಿ, ನಮ್ಮ ಶಕ್ತಿ, ಇತಿಹಾಸ ‌ಮುಂದೆ ಯಾವುದೇ ‌ಇಲ್ಲ. ರಾಜ್ಯಾದ್ಯಂತ 100 ಕಾಂಗ್ರೆಸ್ ಕಛೇರಿ ನಿರ್ಮಾಣಕ್ಕಾಗಿ ಸಚಿವರು, ಶಾಸಕರು ಮುಂದಾಗಿ ಎಂದರು.

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ
ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂದಿ , ಮಲ್ಲಿಕಾರ್ಜುನ ಖರ್ಗೆ ಹಾಗೂ ದೇಶದ ಕಾಂಗ್ರೆಸ್ ಗಣ್ಯ ನಾಯಕರು ಆಗಮಿಸಲಿದ್ದಾರೆ.

ನೂರು ವರ್ಷದ ಇತಿಹಾಸಕ್ಕೆ ಸಮಾವೇಶ ಸಾಕ್ಷಿಯಾಗಲಿದೆ. ಈ ಸಮಾವೇಶಕ್ಕೆ ೧೫೦ ಜನ ಎಂಪಿಗಳು ೪೦ ಬಿಸಿಸಿ ಅಧ್ಯಕ್ಷರುಗಳು, ಕಾಂಗ್ರೆಸ್‌ ಸದಸ್ಯರು, ಸಿಎಂ ಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ರಾಜು ಸೇಠ, ಬುಡಾ ಅಧ್ಯಕ್ಷ ಲಕ್ಷಣರಾವ್ ಚಿಂಗಳೆ, ವಿನಯ ನಾವಲಗಟ್ಟಿ ಇತರರು ಇದ್ದರು.

Tags :