‘ಮೋದಿ ಅದಾನಿʼ ಮುಖವಾಡ ಧರಿಸಿ ಅಣಕು ಪ್ರತಿಭಟನೆ ..
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಮುಖವಾಡಗಳನ್ನು ಧರಿಸಿ ಕಾಂಗ್ರೆಸ್ ಮುಖಂಡರು ಅಣಕು ಪ್ರದರ್ಶನ ಮಾಡಿದ್ದಾರೆ, ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಟ್ಯಾಗೋರ್ ಮತ್ತು ಉಲಕ ಅವರಿಗೆ ಪ್ರಶ್ನೆಗಳನ್ನು ಕೇಳಿದರು. ಮೋದಿ ಅದಾನಿ ಇಬ್ಬರ ಸಂಬಂಧ ಹೇಗೆ ಎಂದು ಪ್ರಶ್ನೆ ಕೇಳಿದಾಗ, ಅವರು " ಹಮ್ ದೋನೋ ಮಿಲ್ಕೆ ಸಬ್ ಕರೇಂಗೆ (ಎಲ್ಲವನ್ನೂ ಒಟ್ಟಿಗೆ ಮಾಡುತ್ತೇವೆ) ನಾವು ವರ್ಷಗಳಿಂದ ಸಂಬಂಧ ಹೊಂದಿದ್ದೇವೆ" ಎಂದು ಯತ್ತರಿಸಿದ್ದಾರೆ, ಸಂಸತ್ ಕಲಾಪ ಏಕೆ ಸ್ಥಗಿತಗೊಂಡಿದೆ ಎಂದು ರಾಹುಲ್ ಗಾಂಧಿ ಅವರ ಪ್ರಶ್ನೆಗೆ "ಅವರು ಇಂದು ನಾಪತ್ತೆಯಾಗಿದ್ದಾರೆ, ಅಮಿತ್ ಭಾಯ್ ಇಂದು ಸದನಕ್ಕೆ ಬಂದಿಲ್ಲ" ಎಂದು ಹೇಳಿದರು.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆಯ ಕಲಾಪ ಮತ್ತೆ ಅಸ್ತವ್ಯಸ್ತಗೊಂಡಿದೆ. ಸೋಮವಾರ ಬೆಳಗ್ಗೆ ಸದನದ ಕಲಾಪ ಆರಂಭವಾದಾಗ ಪ್ರತಿಪಕ್ಷಗಳು ಅದಾನಿ ವಿಚಾರದಲ್ಲಿ ಗದ್ದಲ ಎಬ್ಬಿಸಲು ಆರಂಭಿಸಿದ ಕಾರಣ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಬೇಕಾಯಿತು. ಇದಕ್ಕೂ ಮುನ್ನ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸಂಸದರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದು, ಇದರಲ್ಲಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದರು.