ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಕ್ರಮವಾಗಿ ನೆಲೆಸಿದ್ದ 7 ಬಾಂಗ್ಲಾದೇಶೀಯರ ಬಂಧನ

12:06 PM Oct 12, 2024 IST | Samyukta Karnataka

ಉಡುಪಿ: ಮಲ್ಪೆ ಸಮೀಪದ ಹೂಡೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಮಲ್ಪೆ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಅಕ್ರಮ ನಿವಾಸಿಗಳಲ್ಲೋರ್ವನಾದ ಮೊಹಮ್ಮದ್ ಮಾಣಿಕ್ ಹುಸೇನ್ (26) ಎಂಬಾತ ದುಬೈಗೆ ತೆರಳಲಿದ್ದು, ಬಜ್ಜೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಎಮಿಗ್ರೇಶನ್ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದ. ನಕಲಿ ಪಾಸ್ ಪೋರ್ಟ್ ಹೊಂದಿದ್ದ. ಮಲ್ಪೆ ಪೊಲೀಸರಿಗೊಪ್ಪಿಸಿದ ಆತನನ್ನು ವಿಚಾರಿಸಿದಾಗ ಆತ ಕಳೆದ 5 ವರ್ಷದಿಂದ ಗುಜ್ಜರಬೆಟ್ಟಿನಲ್ಲಿ ವಾಸವಾಗಿದ್ದು ಕಟ್ಟಡ ಕಾರ್ಮಿಕನಾಗಿದ್ದ ವಿಚಾರ ಬೆಳಕಿಗೆ ಬಂತು. ಆತ ಪಶ್ಚಿಮ‌ ಬಂಗಾಳ ಗಡಿ ಮೂಲಕ ಭಾರತಕ್ಕೆ ಅಕ್ರಮ ಪ್ರವೇಶ ಪಡೆದಿದ್ದ.
ಆತನೊಂದಿಗೆ ಇತರ 6 ಮಂದಿ ಕಳೆದ 3-4 ವರ್ಷದಿಂದ ನೆಲೆಸಿದ್ದು ಅವರೆಲ್ಲರೂ ನಕಲಿ ಆಧಾರ್ ಕಾರ್ಡ್ ಹಾಗೂ ನಕಲಿ‌ ಪಾಸ್ ಪೋರ್ಟ್ ಇತ್ಯಾದಿ ಹೊಂದಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಏಳು ಮಂದಿಯನ್ನೂ ವಶಕ್ಕೆ ಪಡೆದು ಹೆಚ್ಚಿನ ತನಿಖೆಗೊಳಪಡಿಸಲಾಗಿದೆ ಎಂದು ಎಸ್.ಪಿ. ಡಾ.ಕೆ. ಅರುಣ್ ತಿಳಿಸಿದ್ದಾರೆ.

Tags :
#ಅಕ್ರಮ#ಉಡುಪಿ
Next Article