For the best experience, open
https://m.samyuktakarnataka.in
on your mobile browser.

ಅನಿಲ ಸೋರಿಕೆ ಶಂಕೆ: ಒಂದೇ ಕುಟುಂಬದ ನಾಲ್ವರು ಸಾವು

12:55 PM May 22, 2024 IST | Samyukta Karnataka
ಅನಿಲ ಸೋರಿಕೆ ಶಂಕೆ  ಒಂದೇ ಕುಟುಂಬದ ನಾಲ್ವರು ಸಾವು

ಮೈಸೂರು: ಅಡುಗೆ ಅನಿಲ ಸೋರಿಕೆಯಿಂದ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಮೈಸೂರಿನ ಯರಗನಹಳ್ಳಿ ಎಂಬಲ್ಲಿ ಸಂಭವಿಸಿದೆ.
ಕುಮಾರಸ್ವಾಮಿ (45), ಪತ್ನಿ ಮಂಜುಳಾ (39) ಹಾಗೂ ಮಕ್ಕಳಾದ ಅರ್ಚನಾ (19), ಸ್ವಾತಿ (17) ಮೃತರು. ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.