For the best experience, open
https://m.samyuktakarnataka.in
on your mobile browser.

"ಅನ್ನ" ಸಿನಿಮಾ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

01:09 PM Sep 21, 2024 IST | Samyukta Karnataka
 ಅನ್ನ  ಸಿನಿಮಾ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರ: ಅನ್ನಭಾಗ್ಯ ಯೋಜನೆಯ ಮಹತ್ವದ ಬಗ್ಗೆ "ಅನ್ನ" ಸಿನೆಮಾ ಬೆಳಕು ಚೆಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಿನ್ನೆ ಮೈಸೂರಿನ ಡಿ.ಆರ್.ಸಿ ಚಿತ್ರಮಂದಿರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ "ಅನ್ನ" ಚಲನಚಿತ್ರ ವಿಕ್ಷಣೆ ಮಾಡಿದ್ದು ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಅನ್ನ ಉಣ್ಣಲು ನನ್ನೂರಿನ ಜನ ಹಬ್ಬಕ್ಕಾಗಿ ಕಾಯುತ್ತಿದ್ದ ನನ್ನ ಬಾಲ್ಯದ ದಿನಗಳು ಈ ಸಿನಿಮಾದ ಕಥೆಯ ಮೂಲಕ ಕಣ್ಣೆದುರು ಬಂದವು. ನಾನು ಕಂಡ ಹಸಿವು, ಬಡತನಗಳು ನಾಡಿನ ಯಾರೊಬ್ಬರನ್ನೂ ಬಾಧಿಸದಿರಲಿ ಎಂದು 2013ರಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಕೊಟ್ಟಿದ್ದೆ, ಚಿತ್ರದ ಕೊನೆಯಲ್ಲಿ ಈ ಯೋಜನೆಯ ಮಹತ್ವದ ಬಗ್ಗೆಯೂ ಸಿನೆಮಾ ಬೆಳಕು ಚೆಲ್ಲಿದೆ. ಮನೋರಂಜನೆಯ ಜೊತೆಗೆ ಹಸಿವಿನ ಎದುರು ಬೇರೆಲ್ಲಾ ಸಂಬಂಧಗಳು ಹೇಗೆ ನಗಣ್ಯವೆನಿಸುತ್ತವೆ ಎಂಬ ಸಂದೇಶವನ್ನು ಒಳಗೊಂಡ ಈ ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರತಂಡಕ್ಕೆ ಶುಭವಾಗಲಿ, ಚಿತ್ರ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

Tags :