ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅನ್ಮೋಡ್ ಘಾಟ್ ರಸ್ತೆ ಬಂದ್

10:29 PM Jan 03, 2024 IST | Samyukta Karnataka

ಪಣಜಿ: ಜನವರಿ ೫ ರಿಂದ ೨೫ ರವರೆಗೆ ಭಾರೀ ವಾಹನಗಳಿಗೆ ಅನ್ಮೋಡ್ ಘಾಟ್ ರಸ್ತೆಯನ್ನು ಮುಚ್ಚಲಾಗಿದೆ. ರೈಲ್ವೆ ಇಲಾಖೆಯ ಡಬ್ಲಿಂಗ್ ಕಾಮಗಾರಿಗಾಗಿ ರಸ್ತೆ ಬಂದ್ ಮಾಡುವುದಾಗಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಮಾರ್ಗವಾಗಿ ಓಡಾಡುವ ವಾಹನಗಳಿಗೆ ರಾಮನಗರ, ತಿನೇಘಾಟ್, ಸಣ್ಣ ವಾಹನಗಳಿಗೆ ಮರ್ಸಂಗಲ್ ಮತ್ತು ಅನ್ಮೋಡ್, ಕಾಸರ್ಲಾಕ್, ಚಂಡೆವಾಡಿ ಜಗಲಬೆಟ್ ಮಾರ್ಗವನ್ನು ನೀಡಲಾಗಿದೆ. ಭಾರಿ ವಾಹನಗಳಿಗೆ ಅಳ್ನಾವರ-ತಾಳಾಪುರ-ಯಲ್ಲಾಪುರ ಮಾರ್ಗವಾಗಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ತಿಳಿಸಲಾಗಿದೆ.
ಟ್ರಾಫಿಕ್ ಜಾಮ್ ಸಮಸ್ಯೆ: ಅನ್ಮೋದ್ ಘಾಟ್ ಬೆಳಗಾವಿ ಮತ್ತು ಗೋವಾವನ್ನು ಸಂಪರ್ಕಿಸುವ ಪ್ರಮುಖ ಘಾಟ್ ಮಾರ್ಗವಾಗಿದ್ದು, ಈ ಮಾರ್ಗದಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ಒಂದು ವಾರದ ಹಿಂದೆ ಟ್ರಾಲಿಯೊಂದು ಘಾಟ್‌ನಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟು ಮಾಡಿತ್ತು. ಅಲ್ಲದೆ ಕೆಲ ತಿಂಗಳ ಹಿಂದೆ ಅನಮೋಡ್ ನಿಂದ ರಾಮನಗರದವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚಾಲನೆ ನೀಡಿದ್ದರಿಂದ ವಾಹನ ಚಾಲಕರು ಈ ಮಾರ್ಗವಾಗಿ ಓಡಾಟ ನಡೆಸಲು ಕಸರತ್ತು ನಡೆಸಬೇಕಾಯಿತು.
ಪ್ರವೇಶ ಶುಲ್ಕ: ಗೋವಾದಿಂದ ಕರ್ನಾಟಕಕ್ಕೆ ಬರುವ ವಾಹನಗಳು ಅನ್ಮೋಡ್ ಚೆಕ್ ಪೋಸ್ಟ್‌ನಲ್ಲಿ ಪ್ರವೇಶ ಶುಲ್ಕವನ್ನು ಪಾವತಿಸಬೇಕು ಮತ್ತು ಕರ್ನಾಟಕ ಅರಣ್ಯ ಇಲಾಖೆಯು ಹುಲಿ ಸಂರಕ್ಷಿತ ಪ್ರದೇಶಗಳು ಮತ್ತು ರಾಷ್ಟ್ರೀಯ ವನ್ಯಜೀವಿ ಉದ್ಯಾನವನಗಳ ಮೂಲಕ ಹಾದುಹೋಗುವ ವಾಹನಗಳಿಗೆ ಪ್ರವೇಶ ಶುಲ್ಕವನ್ನು ವಿಧಿಸಲು ಪ್ರಾರಂಭಿಸಿದೆ.

Next Article