ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಪಘಾತಕ್ಕೀಡಾಗಿದ್ದ ಕಾರು ಎಳೆದೊಯ್ಯುತ್ತಿದ್ದ ವೇಳೆ ಬೆಂಕಿಗಾಹುತಿ

12:26 PM May 22, 2024 IST | Samyukta Karnataka

ಚಿಕ್ಕಮಗಳೂರು: ಅಪಘಾತವಾಗಿದ್ದ ಕಾರನ್ನು ಟೋಯಿಂಗ್ ಮೂಲಕ ಎಳೆದೊಯ್ಯುವಾಗ ರಸ್ತೆ ಪಕ್ಕದಲ್ಲಿ ಹಾಕಿದ್ದ ಟಿಂಬ‌ರ್ ಮರಗಳಿಗೆ ಢಿಕ್ಕಿ ಹೊಡೆದು ಕಾರು ಸಂಪೂರ್ಣ ಭಸ್ಮವಾದ ಘಟನೆ ಕಳಸ ತಾಲೂಕಿನ ಸಂಸೆ ಸಮೀಪದ ಬಾಲ್ಗಲ್ ಬಳಿ ನಡೆದಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆ ಮಧ್ಯೆ ಧಗ-ಧಗ ಹೊತ್ತಿ ಉರಿದು ಕಾರೊಂದು ಸಂಪೂರ್ಣ ಭಸ್ಮವಾಗಿದೆ.

ಅಪಘಾತವಾಗಿದ್ದ ಕಾರನ್ನ ಟೋಯಿಂಗ್ ಮೂಲಕ ಎಳೆದೊಯ್ಯುವಾಗ ಅವಘಡ ಸಂಭವಿಸಿದೆ. ಅಪಘಾತವಾಗಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ರಸ್ತೆ ಮಧ್ಯೆ ಧಗಧಗ ಉರಿದು, ಕಾರು ಸುಟ್ಟು ಕರಕಲಾಗಿದೆ.

ಕಳಸ ತಾಲೂಕಿನ ಸಂಸೆಯ ಬಾಲ್ಕಲ್ ಬಳಿ ಘಟನೆ ನಡೆದಿದ್ದು, ಅಪಘಾತವಾದ ಕಾರನ್ನ ಮಂಗಳೂರಿಗೆ ಎಳೆದೊಯ್ಯುವ ವೇಳೆ ದುರ್ಘಟನೆ ಸಂಭವಿಸಿದೆ, ಕಳಸ ತಾಲೂಕಿನ ಸಂಸೆಯ ಬಾಲ್ಗಲ್ ತಿರುವಿನಲ್ಲಿ ಅಪಘಾತವಾಗಿ ಕಾರು ಕೆಟ್ಟು ನಿಂತಿತ್ತು. ಘಟನೆ ನಡೆದ ಸ್ಥಳದಿಂದ ಸ್ವಲ್ಪ ದೂರಕ್ಕೆ ಎಳೆಯುತ್ತಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Next Article