ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಇಬ್ಬರ ಹತ್ಯೆಗೆ ಸಂಚು, ಓರ್ವನ ಕೊಲೆ

10:18 AM Feb 05, 2024 IST | Samyukta Karnataka

ಧಾರವಾಡ: ನಿನ್ನೆಯಷ್ಟೇ ಧಾರವಾಡದ ಅಂಬೇಡ್ಕರ್ ನಗರದಲ್ಲಿ ಕೊಲೆ ಪ್ರಕರಣವೊಂದು ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಧಾರವಾಡದಲ್ಲಿ ಮತ್ತೊಂದು ಕೊಲೆ ನಡೆದಿದೆ.

ಧಾರವಾಡದ ಹೊರವಲಯದಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ಇಬ್ಬರ ಮೇಲೆ ಕಾರಿನಲ್ಲಿದ್ದ ಹಲವರು ಹಲ್ಲೆ ಮಾಡಿದ್ದಾರೆ. ಈ ಘಟನೆಯಲ್ಲಿ ಓರ್ವ ಸಾವಿಗೀಡಾಗಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ.

ಅಳ್ನಾವರ ತಾಲೂಕಿನ ಅರವಟಗಿಯ ಕಲ್ಲನಗೌಡ ಪಾಟೀಲ ಎಂಬಾತ ಹತ್ಯೆಗೀಡಾಗಿದ್ದು, ತಡಸಿನಕೊಪ್ಪದ ಸುನೀಲ ಜಕ್ಕಣ್ಣನವರ ಎಂಬಾತ ಗಾಯಗೊಂಡಿದ್ದಾನೆ.

ಈ ಇಬ್ಬರ ಹತ್ಯೆಗೂ ಸಂಚು ರೂಪಿಸಲಾಗಿತ್ತು. ಹತ್ಯೆ ಮಾಡಿದವರು ಯಾರು ಎಂಬುದು ಗೊತ್ತಾಗಿಲ್ಲ. ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಕಲ್ಲನಗೌಡ ಪಾಟೀಲ ಎಂಬಾತ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಸಾವಿಗೀಡಾಗಿದ್ದಾನೆ.

Next Article