For the best experience, open
https://m.samyuktakarnataka.in
on your mobile browser.

ರೈಲಿನಲ್ಲಿ ಮುಸುಕುಧಾರಿಗಳ ದಾಳಿ: ಓರ್ವ ಸಾವು, ಹಲವರಿಗೆ ಗಾಯ

07:43 PM May 16, 2024 IST | Samyukta Karnataka
ರೈಲಿನಲ್ಲಿ ಮುಸುಕುಧಾರಿಗಳ ದಾಳಿ  ಓರ್ವ ಸಾವು  ಹಲವರಿಗೆ ಗಾಯ

ಬೆಳಗಾವಿ: ಬೆಳಗಾವಿಯ ಲೋಂಡಾ ಬಳಿ ರೈಲು ಪ್ರಯಾಣಿಕರ ಮೇಲೆ ಮುಸುಕುದಾರಿಗಳ ತಂಡವೊಂದು ಕ್ರೌರ್ಯ ಮೆರೆದು ಚಾಕುವಿನಿಂದ ಇರಿದ ಘಟನೆ ನಡೆದಿದ್ದು ಓರ್ವ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ರೈಲ್ವೆ ಇಲಾಖೆಯ ಟಿಸಿ ಸೇರಿದಂತೆ ಮೂವರಿಗೆ ತೀವ್ರ ಗಾಯಗಳಾಗಿದ್ದು ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಲ್ಲೆ ನಡೆಸಿದವರು ರೈಲಿನಿಂದ ಹಾರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪಾಂಡಿಚೇರಿ-ಮುಂಬೈ ಮಧ್ಯೆ ಸಂಚರಿಸುವ ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಈ ಘಟನೆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಸಿಗಬೇಕಾಗಿದೆ.