ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಿನಿಮೀಯ ರೀತಿಯಲ್ಲಿ ಆರೋಪಿ ಪರಾರಿ

07:55 PM Jun 07, 2024 IST | Samyukta Karnataka

ಕುಷ್ಟಗಿ: ಬೊಲೆರೋ ವಾಹನ ಕಳ್ಳತನ ಮಾಡಿದ್ದ ಆರೋಪಿಯೊಬ್ಬ ಪೊಲೀಸರು ಅದೇ ಗಾಡಿಯಲ್ಲಿ ಕರೆದುಕೊಂಡು ಹೋಗುವಾಗ ಸಿನಿಮೀಯ ರೀತಿಯಲ್ಲಿ ಪರಾರಿಯಾದ ಘಟನೆ ಕುಷ್ಟಗಿ ತಾಲೂಕಿನ ತಾವರಗೇರಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿಯನ್ನು ಸಿಂಧನೂರಿನ ಸಂತೋಷ ಉಪ್ಪಾರ ಎಂದು ಗುರುತಿಸಲಾಗಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಬೊಲೆರೋ ವಾಹನ ಕಳ್ಳತನವಾಗಿದ್ದಕ್ಕೆ ಪ್ರಕರಣ ದಾಖಲಿಸಿಕೊಂಡ ಅಲ್ಲಿಯ ಪೊಲೀಸರು ಆರೋಪಿಯ ಪತ್ತೆಹಚ್ಚಲು ಸಿಂಧನೂರಿಗೆ ಬಂದಾಗ ಸಂತೋಷ ಎಂಬ ವ್ಯಕ್ತಿ ಮೇಲೆ ಅನುಮಾನ ಬಂದಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆಂದು ಮುಧೋಳಕ್ಕೆ ಅದೇ ಬೊಲೆರೋ ವಾಹನದಲ್ಲಿ ಕರೆದುಕೊಂಡು ಬರುವಾಗ ಸಮೀಪದ ಹಂಚಿನಾಳ ಹತ್ತಿರದ ಟೋಲ್‌ಗೇಟ್ ಹತ್ತಿರ ಮೂತ್ರ ವಿಸರ್ಜನೆಗೆಂದು ಸುಳ್ಳು ಹೇಳಿ, ಕೆಳಗೆ ಇಳಿದಿದ್ದಾನೆ. ಕೆಲವೇ ಕ್ಷಣಗಳಲ್ಲಿ ಅಲ್ಲಿಂದ ಪರಾರಿಯಾಗಿದ್ದಾನೆ. ಆರೋಪಿಯ ಎಡಗೈ ಮೇಲೆ ರಕ್ಷಿತಾ ಎಂಬ ಹಚ್ಚೆ ಗುರುತು ಇದೆ ಎಂದು ತಿಳಿದುಬಂದಿದೆ.

Next Article