For the best experience, open
https://m.samyuktakarnataka.in
on your mobile browser.

ಸ್ನೇಹಿತರಿಂದಲೇ ಸ್ನೇಹಿತನ ಕೊಲೆ

12:15 AM Apr 15, 2024 IST | Samyukta Karnataka
ಸ್ನೇಹಿತರಿಂದಲೇ ಸ್ನೇಹಿತನ ಕೊಲೆ

ಕಲಬುರಗಿ: ಪರಸ್ಪರ ಸ್ನೇಹಿತರ ಮಧ್ಯೆ ಕಲಹ ಉಂಟಾಗಿ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಕೇಂದ್ರ ಬಸ್ ನಿಲ್ದಾಣ ಸಮೀಪದ ವಿದ್ಯಾನಗರದಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತನನ್ನು ಅಶೋಕ ನಗರ ನಿವಾಸಿ ಆಕಾಶ ಆಂಜನೇಯ (೨೬) ಎಂಬಾತನನ್ನು ಕೊಲೆಗಿಡಾದ ಯುವಕ ಎಂದು ಗುರುತಿಸಲಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಡಾ. ಬಿ. ಆರ್ . ಅಂಬೇಡ್ಕರ್ ಜಯಂತಿಯ ಮೆರವಣಿಗೆ ವೇಳೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಶೋಕ ನಗರ ಠಾಣೆ ಪೊಲೀಸ್ ರು ಭೇಟಿ ನೀಡಿ ಪರಿಶೀಲಿಸಿದ್ದಾರೆ.