ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

೫೧.೬೯ ಕೋಟಿ ವಂಚನೆ ಆರೋಪ: ಹೆಸ್ಕಾಂ ನಿವೃತ್ತ ಅಧಿಕಾರಿ ಮಳಿಮಠ ವಿರುದ್ಧ ಪ್ರಕರಣ ದಾಖಲು

11:19 PM Feb 16, 2024 IST | Samyukta Karnataka

ಹುಬ್ಬಳ್ಳಿ: ಅಧಿಕಾರ ದುರುಪಯೋಗ ಪಡಿಸಿಕೊಂಡು ಸುಳ್ಳು ಲೆಕ್ಕವನ್ನು ತೋರಿಸಿ ಹೆಸ್ಕಾಂಗೆ ೫೧,೬೯ ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ನಿವೃತ್ತ ಉಗ್ರಾಣ ಪಾಲಕ ಬಸವರಾಜ ಮಳಿಮಠ ವಿರುದ್ಧ ಪ್ರಕರಣ ದಾಖಲಾಗಿದೆ.
ಇಲ್ಲಿನ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಅಧಿಕಾರಿ ಶರಣಮ್ಮ ಜಂಗಿನ್ ಅವರು ದೂರು ದಾಖಲಿಸಿದ್ದಾರೆ.
ಆರೋಪಿತರು ೨೦೧೩ ರಿಂದ ೨೦೨೩ ಜುಲೈ ೩೧ ರವರೆಗೆ ಹೆಸ್ಕಾಂ ನಗರ ವಿಭಾಗೀಯ ಉಗ್ರಾಣ ಹಾಗೂ ಗ್ರಾಮೀಣ ವಿಭಾಗೀಯ ಉಗ್ರಾಣ ಪಾಲಕರಾಗಿ ನಿಯೋಜಿಸಿದ್ದ ಹುದ್ದೆಗೆ ನೀಡಿರುವ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ನಂಬಿಕೆ ದ್ರೋಹ, ಸುಳ್ಳು ಸರಕುಪಟ್ಟಿ ದಾಖಲೆ ಸೃಷ್ಟಿ ಮಾಡಿ, ಸುಳ್ಳು ಲೆಕ್ಕವನ್ನು ತೋರಿಸಿ, ನಿಗಮಕ್ಕೆ ವಂಚನೆ ಮಾಡಿರುವ ಆರೋಪದಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳಿಂದ ೫೧,೬೯,೪೯,೦೫೪ ರೂಪಾಯಿಗಳ ಮೌಲ್ಯದ ಸಾಮಗ್ರಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Next Article