For the best experience, open
https://m.samyuktakarnataka.in
on your mobile browser.

ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ : ಇಬ್ಬರು ಬೈಕ್ ಸವಾರರ ಸಾವು

07:36 PM Feb 14, 2024 IST | Samyukta Karnataka
ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ   ಇಬ್ಬರು ಬೈಕ್ ಸವಾರರ ಸಾವು

ವಿಜಯಪುರ : ರಾಷ್ಟ್ರೀಯ ಹೆದ್ದಾರಿ ೨೧೮ ರ ಕಾರಜೋಳದ ಬಸವೇಶ್ವರ ಸಕ್ಕರೆ ಫ್ಯಾಕ್ಟರಿ ಸಮೀಪ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಳೆದ ತಡರಾತ್ರಿ ನಡೆದಿದೆ.
ಅಪಘಾತದಲ್ಲಿ ಕಾಖಂಡಕಿ ಗ್ರಾಮದ ರಾಜೇಂದ್ರ ಜಗದೀಶ ಬಿಸನಾಳ(೨೮), ರಾಹುಲ್ ಈರಣ್ಣ ಕಂಬಾರ(೨೬) ಎಂಬ ಇಬ್ಬರು ಬೈಕ್ ಸವಾರರು. ರಾತ್ರಿ ೧೧ ರ ಸುಮಾರಿಗೆ ಬೈಕ್‌ನಲ್ಲಿ ಹೋಗುವ ವೇಳೆ ರಸ್ತೆ ಪಕ್ಕದಲ್ಲಿ ನಿಂತಿದ್ದ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಈ ಕುರಿತು ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.