ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅರಸು ಉದ್ಘಾಟಿಸಿದ ಜಲಾಶಯಕ್ಕೆ ಆಗಮಿಸುತ್ತಿರುವ ಸಿಎಂ

11:41 AM Oct 14, 2024 IST | Samyukta Karnataka

ಬಳ್ಳಾರಿ: ಸಂಡೂರಿನಲ್ಲಿರುವ ನಾರಿಹಳ್ಳ ಕಿರು ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸುವ ಹಿನ್ನೆಲೆಯಲ್ಲಿ ಕಿರು ಜಲಾಶಯ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.
0.810 ಟಿಎಂಸಿ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಜಲಾಶಯವನ್ನು ೧೯೭೨ರಲ್ಲಿ‌ ಲೋಕಾರ್ಪಣೆ ಮಾಡಲಾಗಿತ್ತು. ಆಗಿನ ಸಿಎಂ ದೇವರಾಜು ಅರಸು ಅವರು ಜಲಾಶಯವನ್ನು ಉದ್ಘಾಟಿಸಿದ್ದರು. 615 ಕಿಮೀ ವಿಸ್ತೀರ್ಣ ಹೊಂದಿರುವ ಕಿರು ಜಲಾಶಯ ಸಂಡೂರು ಪಟ್ಟಣ ಸೇರಿ ವಿವಿಧ ಗ್ರಾಮ ಕುಡಿಯುವ ನೀರಿಗೆ ಆಧಾರವಾಗಿದೆ. ಐದು ಕ್ರಸ್ಟ್‌ ಗೇಟ್‌ಗಳನ್ನ ಹೊಂದಿದೆ. ಮದುವಣಗಿತ್ತಿಯಂತೆ ಸಿಂಗಾರಗೊಂಡಿರುವ ಕಿರು ಜಲಾಶಯಕ್ಕೆ ನೂರಾರು ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದಯ, ಸಿಎಂ ಆಗಮಿಸುವ ಹಿನ್ನೆಲೆಯಲ್ಲಿ ಯಾರನ್ನು ಬಿಡುತ್ತಿಲ್ಲ.

ಕೋತಿಗಳ ಕಾಟ: ನಿತ್ಯ ಜಲಾಶಯದ ಬಳಿ ನೂರಾರು ಸಂಖ್ಯೆಯಲ್ಲಿ ಕೋತಿಗಳಿ ಜಮಾಯಿಸುತ್ತವೆ. ಇವತ್ತು ಕೂಡ ಕೋತಿಗಳು ಜಮಾವಣೆಗೊಂಡಿವೆ. ಪೆಂಡಾಲ್, ಬಾಗೀನ ಅರ್ಪಣೆ ಸಾಮಗ್ರಿಗಳನ್ನು ದಕ್ಕೆ ಮಾಡುತ್ತವೆ ಎನ್ನುವ ಕಾರಣಕ್ಕೆ ಪಟಾಕಿ ಸಿಡಿಸಿ ಕೋತಿಗಳನ್ನು ಓಡಿಸುತ್ತಿರುವುದು ಕಂಡು ಬಂತು.

Tags :
#ಜಲಾಶಯ#ಬಳ್ಳಾರಿ#ಸಂಡೂರು#ಸಿದ್ದರಾಮಯ್ಯ
Next Article