ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅವರ ಲೇಖನಗಳು, ವರದಿಗಳು ಸದಾ ನಮಗೆ ಮಾರ್ಗದರ್ಶಿಯಾಗಿವೆ

01:08 PM Mar 01, 2024 IST | Samyukta Karnataka

ಬೆಂಗಳೂರು: ಹಿರಿಯ ಪತ್ರಕರ್ತ ರಾಮ ಮನಗೂಳಿ ಅವರ ನಿಧನಕ್ಕೆ ಸಚಿವ ಎಂ ಬಿ ಪಾಟೀಲ್ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಹಿರಿಯ ಪತ್ರಕರ್ತ ರಾಮ ಮನಗೂಳಿ ಅವಿಭಜಿತ ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳ ಕುರಿತು ತಮ್ಮ ಲೇಖನಗಳ ಮೂಲಕ ಸರಕಾರಕ್ಕೆ ಚುರುಕು ಮುಟ್ಟಿಸುತ್ತಿದ್ದರು.

ವಿಶೇಷವಾಗಿ ಕೃಷ್ಣಾ ಮೇಲ್ದಂಡೆ ಯೋಜನೆ, ಆಲಮಟ್ಟಿ ಅಣೆಕಟ್ಟು ಎತ್ತರ ಮತ್ತು ಬಾಗಲಕೋಟೆ ನವನಗರ ನಿರ್ಮಾಣ, ಸಂತ್ರಸ್ತರಿಗೆ ಭೂ ಪರಿಹಾರ, ಪುನರ್ ವಸತಿ ಕುರಿತು ಸುದೀರ್ಘ ಅನುಭವ ಮತ್ತು ಅಪಾರ ಜ್ಞಾನ ಹೊಂದಿದ್ದ ಅವರು ತಮ್ಮ ಸರಣಿ ಲೇಖನಗಳ ಮೂಲಕ ಬೆಳಕು ಚೆಲ್ಲುತ್ತಿದ್ದರು. ನಾನು 2013-18 ರ ಅವಧಿಯಲ್ಲಿ ಜಲಸಂಪನ್ಮೂಲ ಸಚಿವನಾಗಿದ್ದಾಗ ದೂರವಾಣಿ ಮೂಲಕ ಅವರೊಂದಿಗೆ ಚರ್ಚಿಸಿದಾಗ ಸಲಹೆ ನೀಡುತ್ತಿದ್ದರು. ಅವರ ಅಗಲಿಕೆ ನನಗೆ ವೈಯಕ್ತಿವಾಗಿ ದುಃಖ ತಂದಿದೆ. ಅವರ ಲೇಖನಗಳು, ವರದಿಗಳು ಸದಾ ನಮಗೆ ಮಾರ್ಗದರ್ಶಿಯಾಗಿವೆ ಎಂದಿದ್ದಾರೆ.

Next Article