ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಆಂಬ್ಯುಲೆನ್ಸ್ ಚಾಲಕರಿಗೆ 4 ತಿಂಗಳಿನಿಂದ ಸಂಬಳ ನೀಡಿಲ್ಲ ಈ ದರಿದ್ರ …

03:00 PM Mar 28, 2024 IST | Samyukta Karnataka

ಬೆಂಗಳೂರು: ಆಂಬ್ಯುಲೆನ್ಸ್ ಚಾಲಕರಿಗೆ 4 ತಿಂಗಳಿನಿಂದ ಸಂಬಳ ನೀಡಿಲ್ಲ, ಈ ರಾಜ್ಯವನ್ನ ಎಂತಹ ದಯನೀಯ ಪರಿಸ್ಥಿತಿಗೆ ತಂದಿದೆ ಎಂದು ವಿಪಕ್ಷ ನಾಯಕ ಆರ್​. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಹಗಲು ರಾತ್ರಿ ಎನ್ನದೇ ಶ್ರಮಪಟ್ಟು ಜನರ ಜೀವ ಉಳಿಸುವ ರಾಜ್ಯದ 3,500 ಆಂಬ್ಯುಲೆನ್ಸ್ ಚಾಲಕರಿಗೆ 4 ತಿಂಗಳಿನಿಂದ ಸಂಬಳ ನೀಡಿಲ್ಲ ಈ ದರಿದ್ರ ಕಾಂಗ್ರೆಸ್‌ ಸರ್ಕಾರ.
ಹೊಸ ಆಸ್ಪತ್ರೆ, ಹೊಸ ಮೆಡಿಕಲ್ ಕಾಲೇಜು ಕಟ್ಟಿಸಲು ಯೋಗ್ಯತೆ ಇಲ್ಲದಿದ್ದರೆ ಹೋಗಲಿ ಕನಿಷ್ಠ ಪಕ್ಷ ದುರಸ್ತಿಗೆ ಬಂದಿರುವ ಆಂಬ್ಯುಲೆನ್ಸ್ ರಿಪೇರಿ ಮಾಡಿಸಲು, ಆಂಬ್ಯುಲೆನ್ಸ್ ಚಾಲಕರಿಗೆ ಸಮಯಕ್ಕೆ ಸರಿಯಾಗಿ ವೇತನ ನೀಡಲೂ ದುಡ್ಡಿಲ್ಲ ಅಂದರೆ ಸಿಎಂ ಸಿದ್ದರಾಮಯ್ಯ ಸರ್ಕಾರ ಈ ರಾಜ್ಯವನ್ನ ಎಂತಹ ದಯನೀಯ ಪರಿಸ್ಥಿತಿಗೆ ತಂದಿದೆ ಎನ್ನುವುದು ಸ್ಪಷ್ಟವಾಗುತ್ತಿದೆ ಎಂದಿದ್ದಾರೆ.

Next Article