ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಆತ್ಮಲಿಂಗಕ್ಕೆ ಹೈಕೋರ್ಟ್ ಜಡ್ಜ್ ವಿಶೇಷ ಪೂಜೆ

04:14 PM Mar 31, 2024 IST | Samyukta Karnataka

ಗೋಕರ್ಣ: ರಾಜ್ಯ ಉಚ್ಚನ್ಯಾಯಲಯದ ನ್ಯಾಯಮೂರ್ತಿಗಳಾದ ಕೆ. ನಟರಾಜನ್‌ರವರು ಶನಿವಾರ ಸಂಜೆ ಪುರಾಣ ಪ್ರಸಿದ್ಧ ಮಹಾಬಲೇಶ್ವರ ಮಂದಿರಕ್ಕೆ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು.
ಮಂದಿರದ ಮೇಲುಸ್ತುವಾರಿ ಸಮಿತಿ ಸದಸ್ಯರಾದ ವೇ. ಪರಮೇಶ್ವರ ಮಾರ್ಕಾಂಡೆ ಪೂಜಾ ಕೈಂಕರ್ಯ ನೆರವೇರಿಸಿದರು. ಬಳಿಕ ಮಂದಿರದವತಿಯಿಂದ ಪ್ರಸಾದ ನೀಡಿ ಗೌರವಿಸಿದರು. ಇದಕ್ಕೂ ಮೊದಲು ಮಹಾಗಣಪತಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಈ ವೇಳೆ ಸ್ಥಳೀಯ ಕಂದಾಯ ಇಲಾಖೆ ಅಧಿಕಾರಿಗಳು, ಮಂದಿರದ ಸಿಬ್ಬಂದಿ ಉಪಸ್ಥಿತರಿದ್ದರು. ಇಲ್ಲಿನ ಪೊಲೀಸ್ ಸಿಬ್ಬಂದಿ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು.

Next Article