For the best experience, open
https://m.samyuktakarnataka.in
on your mobile browser.

ಆರೋಪ ಎದುರಿಸುತ್ತಿದ್ದರೂ ಪದಕ ನೀಡಿದ್ದೇಕೆ…?

11:20 AM Aug 16, 2024 IST | Samyukta Karnataka
ಆರೋಪ ಎದುರಿಸುತ್ತಿದ್ದರೂ ಪದಕ ನೀಡಿದ್ದೇಕೆ…

ಬೆಂಗಳೂರು: ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದರೂ, ಪದಕ ನೀಡಿದ್ದೇಕೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಮೈಸೂರು ಸಿ.ಸಿ.ಬಿ. ಘಟಕದ ಪೊಲೀಸ್ ಕಾನ್ಸ್ಟೇಬಲ್ ಸಲೀಂ ಪಾಷಾ ಆರೋಪಿಗಳ ಜೊತೆ ಸಂಪರ್ಕ, ಸಾರ್ವಜನಿಕರ ಆಸ್ತಿ ಕಳವು ಸೇರಿದಂತೆ ಅನೇಕ ಗಂಭೀರ ಆರೋಪಿಗಳನ್ನು ಎದುರಿಸುತ್ತಿದ್ದರೂ, ಅವರಿಗೆ ಮುಖ್ಯ ಮಂತ್ರಿಗಳ ಪದಕ ನೀಡಿದ್ದೇಕೆ ಎಂಬುದನ್ನು ಮುಖ್ಯ ಮಂತ್ರಿಗಳು ರಾಜ್ಯದ ಜನತೆಗೆ ತಿಳಿಸಬೇಕು.
ಇಂತಹ ಆರೋಪ ಹೊತ್ತ ಪೊಲೀಸರಿಗೆ ಪದಕ ನೀಡಿದರೆ, ಕಷ್ಟಪಟ್ಟು ದುಡಿಯುತ್ತಿರುವ ನಿಷ್ಠಾವಂತ ಪೇದೆಗಳಿಗೆ, ಅಧಿಕಾರಗಳಿಗೆ ಮನೋಸ್ಥೈರ್ಯ ಏನಾಗಬೇಕೆಂದು ಯೋಚಿಸಿದ್ದೀರಾ ? ನಿಮ್ಮ shortlisting criteria ಏನೆಂಬುದನ್ನು ತಿಳಿಸಿ. ಕೂಡಲೇ ಪದಕವನ್ನು ವಾಪಾಸ್ ಪಡೆದು, ಇವರ ಮೇಲೆ ತನಿಖೆಯನ್ನು ಚುರುಕುಗೊಳಿಸಿ ಎಂದಿದ್ದಾರೆ.

Tags :