ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಆರ್‌ಸಿಬಿ ಸಮಾವೇಶಕ್ಕೆ ಹೆಚ್ಚು ಜನ ಪಾಲ್ಗೊಳ್ಳಿ

07:24 PM Oct 18, 2024 IST | Samyukta Karnataka

ಕೊಪ್ಪಳ: ಬಾಗಲಕೋಟೆಯಲ್ಲಿ ಅ. 20ರಂದು ರಾಯಣ್ಣ, ಚೆನ್ನಮ್ಮ ಬ್ರಿಗೇಡಿನ ಬೃಹತ್ ಪೂರ್ವಬಾವಿ ಸಭೆ ನಡೆಯಲಿದೆ. ಆ ಸಭೆಯಲ್ಲಿ 5ರಿಂದ 10 ಸಾವಿರ ಜನ ಸೇರಲಿದ್ದಾರೆ. 50ಕ್ಕೂ ಹೆಚ್ಚು ಸ್ವಾಮೀಜಿಗಳು ಭಾಗವಹಿಸಲಿದ್ದು, ಕೊಪ್ಪಳ ಜಿಲ್ಲೆಯಿಂದಲೂ ಬಹಳಷ್ಟು ಜನರು ಭಾಗವಹಿಸಬೇಕು ಎಂದು ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಮುಖಂಡ ಕಾಂತೇಶ್ ಈಶ್ವರಪ್ಪ ಹೇಳಿದರು.
ನಗರದ ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ರಾಯಣ್ಣ ಚೆನ್ನಮ್ಮ ಬ್ರಿಗೇಡಿನ ಬಾಗಲಕೋಟೆಯ ಬೃಹತ್ ಸಮಾವೇಶ ದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಾನು ಜನಪ್ರತಿನಿಧಿಯಲ್ಲ, ಆದರೂ ಇಷ್ಟು ಜನ ಬಂದಿದ್ದೀರಿ. ಇದು ಹೆಮ್ಮೆಯ ಸಂಗತಿಯಾಗಿದೆ. ರಾಜ್ಯದಲ್ಲಿ ದಲಿತರು ಮತ್ತು ಹಿಂದುಳಿದವರಿಗೆ ಅನ್ಯಾಯವಾಗುತ್ತಿದೆ. ಪಕ್ಕದಲ್ಲಿ ಇದ್ದುಕೊಂಡೇ ನನ್ನನ್ನು ರಾಜಕೀಯವಾಗಿ ತುಳಿದರು. ಹಾಗಾಗಿ ದಲಿತರು ಮತ್ತು ಹಿಂದುಳಿದವರಿಗಾಗಿ ಸಂಘಟನೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಶಾಸಕ ಅಥವಾ ಸಂಸದನಾಗುತ್ತೇನೆ ಎಂದರು.

Tags :
bagalkotkanteshkoppalRCB
Next Article