ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಆಳಂದನಲ್ಲಿ ಮತ್ತೊಂದು ಫೈರಿಂಗ್: ಯುವಕನ ಸ್ಥಿತಿ ಗಂಭೀರ

01:03 PM Sep 26, 2024 IST | Samyukta Karnataka

ಕಲಬುರಗಿ: ಆಳಂದ ತಾಲ್ಲೂಕಿನಲ್ಲಿ ಮತ್ತೊಂದು ಫೈರಿಂಗ್ ನಡೆದಿದ್ದು, ಆಳಂದ ಜನತೆಯಲ್ಲಿ ಆತಂಕ‌ಮನೆ ಮಾಡಿದೆ.
ಕಡಗಂಚಿ ಗ್ರಾಮದಲ್ಲಿ ಸ್ನೇಹಿತರ ಜತೆಗೂಡಿ ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ ಸ್ನೇಹಿತರೇ ಸ್ನೇಹಿತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗ್ರಾಮದ ಶಾಂತಪ್ಪ ಪೂಜಾರಿ (28) ಎಡಗೈಗೆ ಒಂದು ಗುಂಡು ತಾಗಿದೆ, ತಡರಾತ್ರಿ ಕಡಗಂಚಿ ಗ್ರಾಮದ ಮನೆಯೊಂದರಲ್ಲಿ ಪಾರ್ಟಿ ಮಾಡುತ್ತಿರುವ ವೇಳೆ ಗುಂಡಿನ ದಾಳಿ ನಡೆದಿದ್ದು, ಶ್ರೀಕಾಂತ್, ಮಾಳಪ್ಪ, ಸೇರಿದಂತೆ ಆರೇಳು ಜನ ಸೇರಿಕೊಂಡು ಪಾರ್ಟಿ ಮಾಡುತ್ತಿರುವಾಗ ರ್ದುಘಟನೆ ನಡೆದಿದೆ. ಪಾರ್ಟಿ ವೇಳೆ ಜಗಳ ಉಂಟಾಗಿ ವಿಕೋಪಕ್ಕೆ ಹೋಗಿ ಗುಂಡಿನ ದಾಳಿ ಮಾಡಿದ ಗನ್ ಸಹಿತ ಆರೋಪಿಗಳಾದ
ಕಾಂತಪ್ಪ ಮತ್ತು ಮಾಳಪ್ಪ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags :
#ಅಪರಾಧ#ಕಲಬುರಗಿ
Next Article