ಇಲ್ಯಾಸ್ ಕೊಲೆ ಪ್ರಕರಣ: ನಾಲ್ವರು ವಶಕ್ಕೆ
11:19 AM Aug 14, 2024 IST | Samyukta Karnataka
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿದ್ದ ಕಡಪ್ಪರ ಸಮೀರ್ನನ್ನು ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ
ಸಮೀರ್ನ ಹತ್ಯೆ ಪ್ರಕರಣದಲ್ಲಿ ಐವರು ಶಾಮೀಲಾಗಿದ್ದು, ಇಲ್ಯಾಸ್ ಪತ್ನಿಯ ಸಹೋದರ ಮೊಹಮ್ಮದ್ ನೌಷದ್ ಈ ಕೊಲೆಯ ಪ್ರಮುಖ ರೂವಾರಿ ಎಂದು ತಿಳಿದು ಬಂದಿದೆ., ನೌಷದ್ಗೆ ನಾಟೇಕಲ್ನ ನಿಯಾಝ್, ಬಜಾಲ್ನ ತನ್ವೀರ್, ಪಡುಬಿದ್ರೆಯ ಇಕ್ಬಾಲ್ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ. ಇಲ್ಯಾಸ್ ಹತ್ಯೆಗೆ ಪ್ರತಿಕಾರವಾಗಿ ಈ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ತಾಯಿಯೊಂದಿಗೆ ಸಮೀರ್ ಮನೆಗೆ ತೆರಳುವಾಗ ಆತನನ್ನು ಕಾರಿನಲ್ಲಿ ಬಂದಿದ್ದ ಅಪರಿಚಿತರ ತಂಡ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ.