ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಉಡುಪಿ: ನಾಲ್ವರು ದುಷ್ಕರ್ಮಿಗಳಿಂದ ದರೋಡೆಗೆ ಯತ್ನ

12:07 PM Aug 02, 2024 IST | Samyukta Karnataka

ಉಡುಪಿ: ಇಲ್ಲಿನ ಬ್ರಹ್ಮಗಿರಿಯ ಅಪಾರ್ಟ್‌ಮೆಂಟ್‌ ಒಂದರಲ್ಲಿ ನಾಲ್ವರು ಮುಸುಕುಧಾರಿಗಳು ದರೋಡೆಗೆ ಯತ್ನಿಸಿರುವ ಘಟನೆ ನಡೆದಿದೆ.
ಸಿಸಿ ಟಿವಿ ದೃಶ್ಯದಲ್ಲಿ ದಾಖಲಾದಂತೆ ನಾಲ್ವರು ಮುಖಕ್ಕೆ ಬಟ್ಟೆ ಸುತ್ತಿಕೊಂಡು ಅಪಾರ್ಟ್‌ಮೆಂಟ್‌ನೊಳಗೆ ನುಗ್ಗಲು ಮುಂದಾಗಿದ್ದಾರೆ. ಗುರುವಾರ ಮುಂಜಾನೆ 3 ಗಂಟೆ ಸುಮಾರಿಗೆ ರಾಡ್‌ಗಳನ್ನು ಹಿಡಿದು ದುಷ್ಕರ್ಮಿಗಳ ಈ ತಂಡ ದರೋಡೆಗೆ ಯತ್ನಿಸಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಒಳನುಗ್ಗಲು ವಿಫಲವಾದ ಹಿನ್ನಲೆಯಲ್ಲಿ ವಾಪಾಸು ತೆರಳಿದ್ದಾರೆ. ಒಂದೇ ಬಡಾವಣೆಯ ಒಟ್ಟು ಮೂರು ಅಪಾರ್ಟ್‌ಮೆಂಟ್‌ಗಳಲ್ಲಿ ಈ ತಂಡ ದರೋಡೆಗೆ ಯತ್ನಿಸಿತ್ತು ಎಂದು ತಿಳಿದುಬಂದಿದೆ.

Next Article