For the best experience, open
https://m.samyuktakarnataka.in
on your mobile browser.

ಸಿಡಿಲು ಬಡಿದು ವ್ಯಕ್ತಿ ಸಾವು

07:28 PM May 14, 2024 IST | Samyukta Karnataka
ಸಿಡಿಲು ಬಡಿದು ವ್ಯಕ್ತಿ ಸಾವು

ಕುಂದಾಪುರ: ಸಿಡಿಲು ಬಡಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಸಿದ್ದಾಪುರ ಗ್ರಾಮದ ಸುರೇಶ ಶೆಟ್ಟಿ(೩೮) ಎಂದು ಗುರುತಿಸಲಾಗಿದೆ.
ಇಂದು ಸಂಜೆಯ ವೇಳೆ ಉಡುಪಿ ಜಿಲ್ಲೆಯಾದ್ಯಂತ ಮಳೆಯಾಗಿದ್ದು, ಕುಂದಾಪುರ ತಾಲೂಕಿನಲ್ಲಿ ಧಾರಕಾರ ಮಳೆಯಾಗಿದೆ. ಈ ಸಂದರ್ಭ ಸಿಡಿಲು ಬಡಿದು ಸುರೇಶ ಶೆಟ್ಟಿ ಮೃತಪಟ್ಟಿದ್ದಾರೆ.