For the best experience, open
https://m.samyuktakarnataka.in
on your mobile browser.

ಉಪರಾಷ್ಟ್ರಪತಿ ಆಗಮನ: ಬಿಆರ್‌ಟಿಎಸ್ ಬಸ್ ಸಂಚಾರ ಸ್ಥಗಿತ

09:50 PM Feb 29, 2024 IST | Samyukta Karnataka
ಉಪರಾಷ್ಟ್ರಪತಿ ಆಗಮನ  ಬಿಆರ್‌ಟಿಎಸ್ ಬಸ್ ಸಂಚಾರ ಸ್ಥಗಿತ

ಹುಬ್ಬಳ್ಳಿ: ಮಾರ್ಚ್ ೧ರಂದು ಧಾರವಾಡದ ಐಐಟಿ ಕ್ಯಾಂಪಸ್‌ನಲ್ಲಿ ವಿವಿಧ ಸೌಲಭ್ಯಗಳ ಉದ್ಘಾಟನೆಗಾಗಿ ಉಪರಾಷ್ಟ್ರಪತಿ ಜಗದೀಪ ಧನಕರ್ ಅವರು ಆಗಮಿಸಲಿದ್ದು, ಗೌರವಾನ್ವಿತರು ಹಾಗೂ ಇತರೆ ಗಣ್ಯರು ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಸಂಚರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಸೂಚನೆಯ ಮೇರೆಗೆ ಮಧ್ಯಾಹ್ನ 1 ಗಂಟೆಯಿಂದ ೪ ಗಂಟೆಯವರೆಗೆ ಚಿಗರಿ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತದೆ. ಸಾರ್ವಜನಿಕ ಪ್ರಯಾಣಿಕರು ಸಹಕರಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗಿಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಕೋರಿದ್ದಾರೆ.