ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಎಕ್ಸಿಟ್ ಪೋಲ್, ಜನ ಗೊಂದಲದಲ್ಲಿ

07:06 PM Jun 03, 2024 IST | Samyukta Karnataka

ಚಿಕ್ಕೋಡಿ: ಲೋಕಸಭಾ ಚುನಾವಣೆ ಎಕ್ಸಿಟ್ ಪೋಲ್‌ನಲ್ಲಿ ಕಾಂಗ್ರೆಸ್‌ಗೆ ಹಿನ್ನೆಡೆಯಾಗಿದೆ ಎಂದು ಕೆಲವು ಸಮೀಕ್ಷೆಗಳು ಹೇಳುತ್ತಿವೆ. ಆದರೆ, ಕೆಲವೊಂದು ಸಮೀಕ್ಷೆಗಳು ಕಾಂಗ್ರೆಸ್‌ಗೆ ಮುನ್ನಡೆ ಆಗಲಿದೆ ಎಂಬ ಸುಳಿವನ್ನೂ ನೀಡಿವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮತ ಹಾಕಿಯಾಗಿದೆ. ಜನರೇ ಈ ವಿಚಾರದಲ್ಲಿ ಗೊಂದಲ್ಲಿದ್ದಾರೆ. ಫಲಿತಾಂಶಕ್ಕೆ ತುಂಬಾ ಸಮಯ ಉಳಿದಿಲ್ಲ. ಎಲ್ಲರೂ ಕಾದು ನೋಡೋಣ, ಅನಗತ್ಯ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದರು.
ಕೆಲವು ಚಾನಲ್‌ನವರು ಬಿಜೆಪಿ ಗೆಲ್ಲುತ್ತೆ ಎಂದು ಹೇಳಿದ್ದಾರೆ. ಇನ್ನೂ ಕೆಲವು ಚಾನಲ್‌ಗಳು ಕಾಂಗ್ರೆಸ್‌ಗೆ ಗೆಲುವು ಸಿಗಲಿದೆ ಎಂದು ಸಮೀಕ್ಷೆ ಮಾಡಿವೆ. ಸೋಶಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಪರ ಒಲವಿದೆ. ಇನ್ನೇನು ಫಲಿತಾಂಶಕ್ಕೆ ಕೆಲವೇ ಗಂಟೆಗಳಷ್ಟೇ ಬಾಕಿ ಉಳಿದಿವೆ. ಯಾರು ಗೆಲ್ತಾರೆ, ಯಾರು ಸೋಲ್ತಾರೆ ಎನ್ನುವುದು ನಾಳೆಯ ಫಲಿತಾಂಶದಲ್ಲಿ ಗೊತ್ತಾಗಲಿದೆ ಎಂದರು.

Next Article