For the best experience, open
https://m.samyuktakarnataka.in
on your mobile browser.

ಎಲ್ಲರೂ ನನ್ನನ್ನು ಸಹಮತಿಸಲೇಬೇಕೆಂಬ ಭಾವನೆ ನನಗಿಲ್ಲ

05:41 PM Oct 11, 2024 IST | Samyukta Karnataka
ಎಲ್ಲರೂ ನನ್ನನ್ನು ಸಹಮತಿಸಲೇಬೇಕೆಂಬ ಭಾವನೆ ನನಗಿಲ್ಲ

ಮೈಸೂರು:  ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಹೇಳಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ, ಅಭಿಮಾನಿಗಳೂ ಇರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇಬೇಕೆಂಬ ಭಾವನೆ ನನಗಿಲ್ಲ. ಒಟ್ಟಾರೆ ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ.

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆ : ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವ ಸಂಪುಟದ ಉಪಸಮಿತಿಗಿರುತ್ತದೆ. ಗೃಹಸಚಿವರು ಈ ಉಪಸಮಿತಿಯ  ನೇತೃತ್ವ ವಹಿಸಿದ್ದು, ಸಮಿತಿಯ ವಿವೇಚನೆಯಂತೆ ಹುಬ್ಬಳ್ಳಿ ಗಲಭೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ. ಆದಾಗ್ಯೂ ಈ ವಿಚಾರವಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ. ಬಿಜೆಪಿಯವರು ಕೇವಲ ಸುಳ್ಳು ವಿಚಾರಗಳ ಆಧರಿಸಿಯೇ ಹೋರಾಟ ಮಾಡುತ್ತಾರೆ. ಸತ್ಯದ ಪರವಾಗಿ ಅವರ ಹೋರಾಟ ಎಂದಿಗೂ ಕಾಣಸಿಗುವುದಿಲ್ಲ.

Tags :