ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಏತನೀರಾವರಿ ಯೋಜನೆಯಡಿ ಕಾಲುವೆ ಮೂಲಕ ಕೆರೆಗಳಿಗೆ ನೀರು

04:56 PM May 10, 2024 IST | Samyukta Karnataka

ಬೆಂಗಳೂರು: ಇಂಡಿ ಹಾಗೂ ಬಸವನ ಬಾಗೇವಾಡಿ ತಾಲ್ಲೂಕಿನ ಬಹುಗ್ರಾಮಗಳ ಕೆರೆಗಳಿಗೆ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದ್ದಾರೆ.
ನೀತಿಸಂಹಿತೆ ಕಾರಣ ಚುನಾವಣಾ ಆಯೋಗದ ಅನುಮತಿ ಪಡೆದು, ಕಾಲುವೆ ಮೂಲಕ ನೀರು ಹರಿಸಲು ಆದೇಶ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಬಿರು ಬೇಸಿಗೆಯಿಂದ ತತ್ತರಿಸಿದ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಲು ಆಲಮಟ್ಟಿ ಜಲಾಶಯದಿಂದ ಮುಳವಾಡ ಏತ ನೀರಾವರಿ ಹಾಗೂ ಚಿಮ್ಮಲಗಿ ಏತನೀರಾವರಿ ಯೋಜನೆಯಡಿ ಗುರುವಾರದಿಂದ ಕಾಲುವೆಗಳ ಮೂಲಕ ಕೆರೆಗಳಿಗೆ ನೀರು ಹರಿಸುವಂತೆ ಸೂಚಿಸಿದ್ದು ಅದು ಕಾರ್ಯಗತವಾಗುತ್ತಿದೆ.

ಕೆಲವು ದಿನಗಳ ಹಿಂದೆ ತಿಡಗುಂದಿ ಕಾಲುವೆಯಿಂದ ನೀರು ಹರಿಸಿ, ಭೂತನಾಳ ಕೆರೆ ತುಂಬಿಸಿ, ವಿಜಯಪುರ ನಗರದಲ್ಲಿ ಸಮಪರ್ಕವಾಗಿ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಈಗ ಮತ್ತೆ ಭೂತನಾಳ ಕೆರೆ, ಇಂಡಿ ತಾಲೂಕಿನ ಹೊರ್ತಿ ಮತ್ತು ಇತರೆ 31 ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಯಡಿ ತಿಡಗುಂದಿ ಕಾಲುವೆ ಮೂಲಕ ನೀರು ಹರಿಸಲಾಗುವುದು.

ಬಸವನಬಾಗೇವಾಡಿ ತಾಲೂಕಿನ ಅರೇಶಂಕರ ಮತ್ತು ಇತರೆ 19 ಗ್ರಾಮಗಳ ಕಣಕಾಲ ಮತ್ತು 11 ಗ್ರಾಮಗಳ ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಯು 0.45ಟಿ.ಎಂ.ಸಿ ನೀರನ್ನು ಮುಳವಾಡ ಏತನೀರಾವರಿ ಹಾಗೂ ಚಿಮ್ಮಲಗಿ ಏತನೀರಾವರಿ ಯೋಜನೆಯಡಿ ಕೆರೆಗಳಿಗೆ ಹರಿಸಲಾಗುವುದು.

ನೀತಿಸಂಹಿತೆ ಕಾರಣ ಚುನಾವಣಾ ಆಯೋಗದ ಅನುಮತಿ ಪಡೆದು, ಕಾಲುವೆ ಮೂಲಕ ನೀರು ಹರಿಸಲು ಆದೇಶ ನೀಡಲಾಗಿದೆ ಎಂದಿದ್ದಾರೆ.

Next Article