ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಏರ್ ಗನ್ ನಿಂದ ಶೂಟೌಟ್: ಬಾಲಕ ಸಾವು

10:09 AM Apr 12, 2024 IST | Samyukta Karnataka

ಚಿಕ್ಕಮಗಳೂರು: ಮಕ್ಕಳ ಆಟಿಕೆಯಂತೆ ಬಳಕೆಯಾದ ಏರ್ ಗನ್ ನಿಂದ ಶೂಟೌಟ್ ಸಂಭವಿಸಿ ಏಳು ವರ್ಷದ ಬಾಲಕ ಮೃತಪಟ್ಟ ಘಟನೆ ಮಲ್ಲೇನಹಳ್ಳಿ ಸಮೀಪದ ಹಕ್ಕಿಪಿಕ್ಕಿ ಕಾಲನಿಯಲ್ಲಿ ಜರುಗಿದ್ದು, ಮನೆಯಲ್ಲಿದ್ದ ಏರ್ ಗನ್ ನಿಂದ ಹಾರಿದ ಗುಂಡು ಮಗುವಿನ ಮೈಸೀಳಿ ಇಹಲೋಕ ತ್ವಜಿಸುವಂತೆ ಮಾಡಿದೆ.

ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಾಲಕ ವಿಷ್ಣುರಾಜ್ (7) ಬಾಲಕ ಏರ್ ಗನ್ ಶೂಟೌಟ್ ಗೆ ಬಲಿಯಾಗಿದ್ದಾನೆ. ಶಿಕಾರಿಗೆಂದಿ ಮನೆಯಲ್ಲಿದ್ದ ಏರ್ ಗನ್ ನಿಂದ ಹಾರಿದ ಗುಂಡು ಪುಟ್ಟ ಮಗುವಿನ ಪ್ರಾಣಪಕ್ಷಿ ಹಾರಿಹೋಗುವಂತೆ ಮಾಡಿದೆ.

ಮಲ್ಲೇನಹಳ್ಳಿ ಗ್ರಾಮದ ಹಕ್ಕಿಪಿಕ್ಕಿ ಜನಾಂಗದ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯಲ್ಲಿ ಏರ್ ಗನ್ ಇಟ್ಟಿದ್ದರು ಎನ್ನಲಾಗಿದ್ದು, ಅಕ್ಕಪಕ್ಕದ ಮನೆಯ ಮಕ್ಕಳು ಆಟವಾಡುವಾಗ ಗನ್ ತಗೆದುಕೊಂಡು ಹುಡುಗಾಟವಾಡುವ ಸಂದರ್ಭದಲ್ಲಿ ಮಿಸ್ ಫೈರ್ ಆಗಿ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಅಲ್ಲದೇ ಬೇರೆ ಕಾರಣದಿಂದ ಕೂಡ ಬಂದೂಕಿನಿಂದ ಫೈರ್ ಆಗಿರಬಹುದೆಂದು ಹೇಳಲಾಗುತ್ತದೆ.

ಮನೆಯವರ ನಿರ್ಲಕ್ಷತನದಿಂದ ಇದೀಗ ಏಳು ವರ್ಷದ ಬಾಲಕ ಮೃತಪಟ್ಟಿದ್ದು, ಮೃತ ಬಾಲಕನ ಸಂಬಂಧಿ ಕನ್ವರ್ ಎಂಬಾತ ನೀಡಿರುವ ದೂರಿನ ಆಧಾರದ ಮೇಲೆ ಗ್ರಾಮಾಂತರ ಠಾಣೆ ಪೊಲೀಸರು ಎಫ್‌ಐಆ‌ರ್ ದಾಖಲು ಮಾಡಿದ್ದಾರೆ, ಬಾಲಕನ ಸಾವಿಗೆ ನಿಖರ ಕಾರಣವೇನೆಂದು ಪೊಲೀಸ್ ತನಿಖೆಯಿಂದ ಅಷ್ಟೇ ತಿಳಿದು ಬರಬೇಕಿದೆ.

Next Article