For the best experience, open
https://m.samyuktakarnataka.in
on your mobile browser.

ಏ. 12ರಂದು ನಾಮಪತ್ರ ಸಲ್ಲಿಕೆ

09:45 PM Mar 26, 2024 IST | Samyukta Karnataka
ಏ  12ರಂದು ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಸುಮಾರು ೨೫ ಸಾವಿರ ಕಾರ್ಯಕರ್ತರೊಂದಿಗೆ ಏಪ್ರಿಲ್ ೧೨ರಂದು ನಾಮಪತ್ರ ಸಲ್ಲಿಸುವುದಾಗಿ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಘೋಷಣೆ ಮಾಡಿದರು.
ಮಂಗಳವಾರ ಶುಭ ಮಂಗಳ ಸಮುದಾಯ ಭವನದಲ್ಲಿ ರಾಷ್ಟ್ರಭಕ್ತರ ಬಳಗದ ವತಿಯಿಂದ ಆಯೋಜಿಸಿದ್ದ ನಗರ ಮತ್ತು ಗ್ರಾಮಾಂತರ ಮಟ್ಟದ ಬೂತ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿ, ಚುನಾವಣೆಗೆ ಇನ್ನೂ ದಿನವಿದೆ. ನನ್ನ ಗುರುತು ಕೂಡ ಇನ್ನೂ ತೀರ್ಮಾನವಾಗಿಲ್ಲ. ಆದ್ದರಿಂದ ಏ. ೧೨ರಂದು ಸಾವಿರಾರು ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸುವೆ ಎಂದರು.