ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಐಐಟಿಯ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ  ನೇಮಕ

06:40 PM May 08, 2024 IST | Samyukta Karnataka

ಧಾರವಾಡ: ಐಐಟಿಯ ನೂತನ ನಿರ್ದೇಶಕರಾಗಿ ಪ್ರೊ.ಎಸ್.ಆರ್.ಮಹಾದೇವ ಪ್ರಸನ್ನ ಅವರು ನೇಮಕಗೊಂಡಿದ್ದಾರೆ.
ಇಲ್ಲಿನ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆಗೆ ನೂತನ ನಿರ್ದೇಶಕರಾಗಿ ನೇಮಕಗೊಂಡಿರುವ ಪ್ರೊ.ಮಹದೇವ ಪ್ರಸನ್ನ ಅವರು  ಈ ಮುಂಚೆ  ಐಐಟಿ ಧಾರವಾಡದಲ್ಲಿ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಮತ್ತು ಡೀನ್ ಹಾಗೂ ಗುವಾಹಟಿಯ ಐಐಟಿಯ ಡೀನ್ (ಸಂಶೋಧನೆ ಮತ್ತು ಅಭಿವೃದ್ಧಿ) ಆಗಿ ಸೇವೆ ಸಲ್ಲಿಸಿದ್ದರು. 2023 ರಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉತ್ತಮ ಶಿಕ್ಷಕ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದರು, ಅಲ್ಲದೆ 2004 ರಲ್ಲಿ ಐಐಟಿ ಮದ್ರಾಸ್‌ನಿಂದ ಪಿಎಚ್‌ಡಿ ಪಡೆದಿದ್ದರು ಎಂದು ಪ್ರಕಟಣೆ ತಿಳಿಸಿದೆ.

Next Article