ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಐಪಿಎಸ್ ಅಧಿಕಾರಿ ವಿರುದ್ಧ ಪ್ರಕರಣ

09:02 PM Apr 23, 2024 IST | Samyukta Karnataka

ಚಿಕ್ಕೋಡಿ: ಕಿರಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ ೧೪ ಜನರ ವಿರುದ್ಧ ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರವೀಂದ್ರ ಗಡಾದಿ ಅವರು ತಮ್ಮ ಸಂಬಂಧಿಕರೊಬ್ಬರಿಗೆ ಸ್ವಂತ ಊರಿನಲ್ಲಿರುವ ಮಹಿಳೆ ಹಾಗೂ ಆಕೆಯ ಪತಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಐಗಳಿ ಗ್ರಾಮದ ನಕುಶಾ ಸೈದಪ್ಪಾ ಗಡಾದೆ ಎಂಬ ಮಹಿಳೆ ಐಗಳಿ ಪೊಲೀಸ್ ಠಾಣೆಯಲ್ಲಿ ೧೪ ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಐಗಳಿ ಗ್ರಾಮದಲ್ಲಿ ಸಾರ್ವಜನಿಕ ಕುಡಿಯುವ ಬಾವಿ ನೀರಿನ ನಳದಿಂದ ಸ್ಥಳೀಯ ಗ್ರಾಮ ಪಂಚಾಯಿತಿ ಅನುಮತಿ ಮೇರೆಗೆ ಹೊಸ ಮನೆ ಕಟ್ಟುವ ಕೆಲಸಕ್ಕೆ ಬಳಕೆ ಮಾಡುವಾಗ ಆರೋಪಿತರು ಅದಕ್ಕೆ ತಕರಾರು ತೆಗೆದು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.
ರವೀಂದ್ರ ಗಡಾದ ಅವರು ಗುಂಪು ಕಟ್ಟಿಕೊಂಡು ಅಶ್ಲೀಲ ಪದ ಬಳಕೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ. ಏ. ೨೦ಕ್ಕೆ ರವಿಂದ್ರ ಗಡಾದಿ ಸೇರಿದಂತೆ ಒಟ್ಟು ೧೪ ಜನರ ಮೇಲೆ ದೂರು ದಾಖಲಾಗಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Next Article