ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆಗೆ ಬಿಜೆಪಿ ಒತ್ತಾಯ

08:14 PM Mar 27, 2024 IST | Samyukta Karnataka

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಮಿಷನರ್ ಹೇಮಂತ್ ನಿಂಬಾಳ್ಕರ್ ಅವರನ್ನು ಈ ಕೂಡಲೇ ಹುದ್ದೆಯಿಂದ ವರ್ಗಾವಣೆ ಮಾಡುವಂತೆ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಹೇಮಂತ್‌ ನಿಂಬಾಳ್ಕರ್‌ ಅವರು ತಮ್ಮ ಅಧಿಕಾರ ಬಳಸಿಕೊಂಡು ತಮ್ಮ ಪತ್ನಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪರವಾಗಿ ಪ್ರಚಾರ ಮಾಡುತ್ತಿರುವುದಾಗಿ ಮಾಹಿತಿ ಸಿಕ್ಕಿದೆ.

ಈ ಕಾರಣದಿಂದಾಗಿ ತಕ್ಷಣ ಅವರನ್ನು ವರ್ಗಾವಣೆ ಮಾಡಿ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಯಲು ಅವಕಾಶ ಮಾಡಿಕೊಡುವಂತೆ ಬಿಜೆಪಿಯ ನಾಯಕರು ಚುನಾವಣಾ ಕಮಿಷನರ್ ಅವರಲ್ಲಿ ಮನವಿ ಮಾಡಿದ್ದಾರೆ.

Next Article