ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಐರಾವತ ಬಸ್‌ಗೆ ಬೆಂಕಿ: ಪ್ರಯಾಣಿಕರು ಪಾರು

10:29 PM May 14, 2024 IST | Samyukta Karnataka

ಚಿಕ್ಕಮಗಳೂರು: ಚಲಿಸುತ್ತಿದ್ದ ಐರಾವತ ಸೆಮಿಸ್ಲೀಪರ್ ಬಸ್‌ಗೆ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
೪೦ ಪ್ರಯಾಣಿಕರನ್ನು ಹೊತ್ತು ಶಿವಮೊಗ್ಗದಿಂದ ಮೈಸೂರಿಗೆ ಈ ಬಸ್ ಹೋಗುತ್ತಿತ್ತು. ಆದರೆ ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರ ಕ್ರಾಸ್ ಬಳಿ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಕೂಡಲೆ ಬಸ್ ನಿಲ್ಲಿಸಿದ್ದು, ಬಳಿಕ ಚಾಲಕ ಮತ್ತು ಕಂಡಕ್ಟರ್ ಮಲಗಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ, ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಕೂಡಲೆ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೂ ಬಸ್ ಸುಟ್ಟು ಕರಕಲಾಗಿದೆ.

Next Article