ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಓಲೈಕೆ ರಾಜಕಾರಣಕ್ಕೇನಾದರೂ ಮತ್ತೊಂದು ಹೆಸರು ಇದ್ದರೇ ಅದು ಕಾಂಗ್ರೆಸ್ ಪಕ್ಷ!

12:37 PM Dec 23, 2023 IST | Samyukta Karnataka

ಬೆಂಗಳೂರು: ರಾಜಕಾರಣಕ್ಕಾಗಿ ಶಾಲಾ ಕಾಲೇಜುಗಳ ಸಮವಸ್ತ್ರ ನೀತಿಯನ್ನೂ ಅಮಾನತು ಮಾಡುವ ಕೆಲಸವನ್ನು ಸಿದ್ದರಾಮಯ್ಯನವರು ಮಾಡುತ್ತಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸಮವಸ್ತ್ರ ನೀತಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್‌ ಮಾಡಿರುವ ಅವರು "ಸಿದ್ದರಾಮಯ್ಯನವರು ಹಿಜಾಬ್ ಧರಿಸಬಹುದು ಎಂದು ಹೇಳುತ್ತಾ ಯಾರು ಯಾವ ಬಟ್ಟೆಯಾದರೂ ಧರಿಸಲು ಅವಕಾಶವಿದೆ ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ನಾನು ಕರೆ ಕೊಡುತ್ತಿದ್ದೇನೆ. ಅವರಿಗಿಲ್ಲದ ಸಮವಸ್ತ್ರ ನೀತಿ ಹಿಂದೂಗಳಿಗೂ ಇಲ್ಲ. ಸಿದ್ದರಾಮಯ್ಯನವರಿಗೆ ಮಾಹಿತಿಯ ಕೊರತೆ ಇದೆ, ರಾಜ್ಯದಲ್ಲಿ ಹಿಜಾಬ್ ನಿಷೇಧಿಸಿ ಯಾವ ಆದೇಶವೂ ಇಲ್ಲ, ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ನೀತಿಯನ್ನು ಜಾರಿ ಮಾಡಿದ್ದು ಸ್ಥಳೀಯ ಕಾಲೇಜುಗಳು ನಿರ್ಧಾರ ಮಾಡಬಹುದು ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಹೇಳಿದ್ದರೂ, ರಾಜಕಾರಣಕ್ಕಾಗಿ ಶಾಲಾ ಕಾಲೇಜುಗಳ ಸಮವಸ್ತ್ರ ನೀತಿಯನ್ನೂ ಅಮಾನತು ಮಾಡುವ ಕೆಲಸವನ್ನು ಸಿದ್ದರಾಮಯ್ಯನವರು ಮಾಡುತ್ತಿದ್ದಾರೆ. ಓಲೈಕೆ ರಾಜಕಾರಣಕ್ಕೇನಾದರೂ ಮತ್ತೊಂದು ಹೆಸರು ಇದ್ದರೇ ಅದು ಕಾಂಗ್ರೆಸ್ ಪಕ್ಷ!
ರಾಜ್ಯಾದ್ಯಂತ ಹಿಂದೂ ವಿದ್ಯಾರ್ಥಿಗಳೂ ಯಾವ ಬಟ್ಟೆಯಾದರೂ ಧರಿಸಿ ಕೇಸರಿ ಶಾಲು ಸಮೇತ ತರಗತಿಗಳಲ್ಲಿ ಭಾಗವಹಿಸುತ್ತಾರೆ, ಅವರಿಗೆ ಯಾವ ಕಿರುಕುಳ ನೀಡಬಾರದು ಎಂದು ಆಗ್ರಹಿಸುತ್ತಿದ್ದೇನೆ." ಎಂದು ಬರೆದುಕೊಂಡಿದ್ದಾರೆ.

Next Article