For the best experience, open
https://m.samyuktakarnataka.in
on your mobile browser.

ಕನ್ನಡ ಪರ ಹೋರಾಟಗಾರರ ಮೇಲಿನ ಕೇಸ್‌ ವಾಪಸ್‌ ಪಡೆಯಿರಿ

07:52 PM Dec 27, 2023 IST | Samyukta Karnataka
ಕನ್ನಡ ಪರ ಹೋರಾಟಗಾರರ ಮೇಲಿನ ಕೇಸ್‌ ವಾಪಸ್‌ ಪಡೆಯಿರಿ

ಬೆಂಗಳೂರು: ಕನ್ನಡ ಪರ ಹೋರಾಟಗಾರರ ಮೇಲಿನ ಪ್ರಕರಣವನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡದಲ್ಲಿ ಫಲಕ ಇರಬೇಕು ಎಂಬುದು ಸತ್ಯವೇ. ಆದರೆ ಅದಕ್ಕಾಗಿ ಕಾನೂನು ಕೈಗೆತ್ತಿಕೊಳ್ಳಬಾರದು. ಕಾನೂನು ಉಲ್ಲಂಘಿಸದೇ ಫಲಕಗಳನ್ನು ಬದಲಾಯಿಸಿ. ಕ್ರಮೇಣ ಎಲ್ಲವೂ ಸರಿ ಹೋಗುತ್ತದೆ. ನೆಲ, ಜಲ ಭಾಷೆಯ ವಿಚಾರದಲ್ಲಿ ಹೋರಾಟ ಮಾಡಿದವರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂದರು.