For the best experience, open
https://m.samyuktakarnataka.in
on your mobile browser.

ಕನ್ನಡ ಬಾವುಟಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಇಂದು ಅಭಿಯಾನ

12:52 PM Nov 11, 2023 IST | Samyukta Karnataka
ಕನ್ನಡ ಬಾವುಟಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಇಂದು ಅಭಿಯಾನ

ಬೆಂಗಳೂರು: ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಂದು(ಶನಿವಾರ) ಸಂಜೆ 5 ಗಂಟೆಯಿಂದ ಟ್ವಿಟರ್ (ಎಕ್ಸ್) ನಲ್ಲಿ ಅಭಿಯಾನ ಹಮ್ಮಿಕೊಂಡಿದೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಅಭಿಯಾನ ನಡೆಸಲಾಗುತ್ತಿದ್ದು, #ಕನ್ನಡಬಾವುಟ_ನಮ್ಮಗುರುತು #KannadaFlag_MyPride ಎಂಬ ಹ್ಯಾಶ್ ಟ್ಯಾಗ್‌ಗಳ ಅಡಿಯಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ. ಈ ಟ್ವಿಟ್ಟರ್ ಆಂದೋಲನದಲ್ಲಿ ಭಾಗವಹಿಸಿ ಕನ್ನಡ ಬಾವುಟಕ್ಕೆ ಮಾನ್ಯತೆ ಕೊಡಿಸುವ ಈ ಹೋರಾಟಕ್ಕೆ ಎಲ್ಲ ಕನ್ನಡಿಗರೂ ಬೆಂಬಲ ನೀಡಬೇಕು” ಎಂದು ಟಿ ಎ ನಾರಾಯಣಗೌಡ ಕೋರಿದ್ದಾರೆ.