For the best experience, open
https://m.samyuktakarnataka.in
on your mobile browser.

ಕನ್ನಡ ಬೋರ್ಡ್‌ಗಳನ್ನು ಪ್ರದರ್ಶಿಸಲು ಏಕೆ ಬಯಸುವುದಿಲ್ಲ?

12:05 PM Dec 28, 2023 IST | Samyukta Karnataka
ಕನ್ನಡ ಬೋರ್ಡ್‌ಗಳನ್ನು ಪ್ರದರ್ಶಿಸಲು ಏಕೆ ಬಯಸುವುದಿಲ್ಲ

ಬೆಂಗಳೂರು: ಕನ್ನಡ ಬೋರ್ಡ್‌ಗಳನ್ನು ಪ್ರದರ್ಶಿಸಲು ಏಕೆ ಬಯಸುವುದಿಲ್ಲ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು "ನನಗೆ ಬಂದಿರುವ ಮಾಹಿತಿ ಪ್ರಕಾರ ಕೆಲವು ಅಂಗಡಿಯವರು ಉದ್ದೇಶಪೂರ್ವಕವಾಗಿ ಕನ್ನಡ ಬೋರ್ಡ್ ಹಾಕಲು ಬಯಸುವುದಿಲ್ಲ, ಅದನ್ನು ನಾನು ಒಪ್ಪುವುದಿಲ್ಲ. ಬಹುಪಾಲು ಜನತೆ ಕನ್ನಡ ಮಾತನಾಡುವವರು ಇರುವಾಗ, ಆಂಗ್ಲ ಮತ್ತು ಹಿಂದಿಯೊಂದಿಗೆ ಕನ್ನಡವನ್ನು ಸೇರಿಸುವಲ್ಲಿ ಅವರ ಸಮಸ್ಯೆ ಏನು? ಜನರು ಕೇಳಿದಾಗ ಅವರು ದುರಹಂಕಾರದಿಂದ ವರ್ತಿಸಿದರು. ನಾನು ಹಿಂಸಾಚಾರವನ್ನು ಒಪ್ಪುವುದಿಲ್ಲ, ಆದರೆ ಅವರು ಕನ್ನಡ ಬೋರ್ಡ್‌ಗಳನ್ನು ಪ್ರದರ್ಶಿಸಲು ಏಕೆ ಬಯಸುವುದಿಲ್ಲ? ಇದಕ್ಕೆ ನನಗೆ ಉತ್ತರ ಬೇಕು! ಎಂದಿದ್ದಾರೆ.