For the best experience, open
https://m.samyuktakarnataka.in
on your mobile browser.

ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪ್ರತಿಭಟನೆ

03:10 PM Mar 10, 2024 IST | Samyukta Karnataka
ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪ್ರತಿಭಟನೆ

ಚಿಕ್ಕಮಗಳೂರು : ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಭುಗಿಲೆದ್ದಿದೆ. ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಭಾನುವಾರ ಬಿಜೆಪಿ ಪಕ್ಷದ ಕಚೇರಿಯಲ್ಲೇ ಪ್ರತಿಭಟನೆ ನಡೆಸಿದರು.

ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಜಿ ಸಚಿವ ಜ್ಞಾನೇಂದ್ರ, ಪಕ್ಷದ ನಾಯಕ ಭಾನುಪ್ರಕಾಶ್ ಅವರ ಎದುರು ಶೋಭಾ ಕರಂದ್ಲಾಜೆಗೆ ವಿರುದ್ಧ ಘೋಷಣೆ ಕೂಗಿದರು.

ಬಿಜೆಪಿ ಕಾರ್ಯಕರ್ತರು ಶೋಭಕ್ಕ ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ದಾರೆ. ಕಾಂಗ್ರೆಸ್ ನೊಂದಿಗೆ ಸೇರಿ ಸಿ.ಟಿ. ರವಿ ಅವರ ಸೋಲಿಗೆ ಕಾರಣರಾಗಿದ್ದಾರೆ. ಅವರಿಗೆ ಬಿಜೆಪಿ ಟಿಕೆಟ್ ಕೊಡಬಾರದು ಎಂದು ಕಾರ್ಯಕರ್ತರು ಒತ್ತಾಯಿಸಿದರು.