ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕರ್ನಾಟಕದಲ್ಲಿ ಇನ್ನೊಂದು ಹಗರಣ

11:22 AM Jul 24, 2024 IST | Samyukta Karnataka

ಸುಮಾರು 600 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ನೀಡಲಾಗಿದೆ.

ಬೆಂಗಳೂರು: ವಾಲ್ಮೀಕಿ ನಿಗಮದಂತೆ ಕರ್ನಾಟಕದಲ್ಲಿ ಇನ್ನೊಂದು ಕೇಂದ್ರ ಹಗರಣದ ಆಗರವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು

  1. ಕರ್ನಾಟಕ ರಾಜ್ಯ ಹ್ಯಾಬಿಟೇಟ್ ಕೇಂದ್ರ, ಬೆಂಗಳೂರು ಎಂಬ ಒಂದು ಸಂಘಕ್ಕೆ ಸುಮಾರು 600 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ನೀಡಲಾಗಿದೆ.
  2. ಈ ಹ್ಯಾಬಿಟೇಟ್ ಕೇಂದ್ರಕ್ಕೆ ಯಾವ ಸಾಂವಿಧಾನಿಕ ಮಾನ್ಯತೆಯೂ ಇಲ್ಲದಿದ್ದರೂ ಮಂತ್ರಿ ಜಮೀರ್ ಅಹ್ಮದ್ ನೇತೃತ್ವದಲ್ಲಿ ಈ ಸಂಸ್ಥೆಗೆ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಲಾಗಿದೆ.
  3. ಈ ಹ್ಯಾಬಿಟೇಟ್ ಕೇಂದ್ರ ಸರ್ಕಾರಿ ಸಂಸ್ಥೆಯಲ್ಲ, ಇದರಲ್ಲಿ ಕಾರ್ಯನಿರ್ವಹಿಸುತ್ತಿರುವವರು ಸರ್ಕಾರೀ ನೌಕರರೂ ಅಲ್ಲ, ಇಲ್ಲಿ ಎಲ್ಲ ಮಾಯಾ!
  4. ಈ ಸಂಸ್ಥೆ ವಿಶೇಷವಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾಮಗಾರಿಗಳನ್ನು ಕೈಗೊಂಡಿರುವುದು ಮಂತ್ರಿ ಹಾಗು ಅಧಿಕಾರಿಗಳು ಕೈಜೋಡಿಸಿರುವಂತೆ ಕಾಣಿಸುತ್ತದೆ.
  5. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದಲೂ ಈ ಹ್ಯಾಬಿಟೆಟ್ ಕೇಂದ್ರಕ್ಕೆ ಹಣ ವರ್ಗಾವಣೆ ಮಾಡಲಾಗಿದೆ.

ವಾಲ್ಮೀಕಿ ನಿಗಮದ ಅಕ್ರಮ ಬಯಲಾದ ದಿನದಿಂದ ಸಚಿವ ಜಮೀರ್ ಈ ಹ್ಯಾಬಿಟೇಟ್ ಕೇಂದ್ರದ ಸಭೆಗಳನ್ನು ಪ್ರತಿನಿತ್ಯವೂ ಮಾಡಿ ಏನನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ? ಯಾವ ಕಡತಕ್ಕೆ ಬೆಂಕಿ ಬೀಳಲಿದೆ? ಈ ಹಣ ಯಾವ ಚುನಾವಣೆಗೆ ಬಳಸಲಾಗಿದೆ? ಎಂದು ಪ್ರಶ್ನಸಿದ್ದಾರೆ.

Next Article