For the best experience, open
https://m.samyuktakarnataka.in
on your mobile browser.

ಕರ್ನಾಟಕದಲ್ಲೂ ರಾಜಕೀಯ ಪಲ್ಲಟ

11:06 PM May 02, 2024 IST | Samyukta Karnataka
ಕರ್ನಾಟಕದಲ್ಲೂ ರಾಜಕೀಯ ಪಲ್ಲಟ

ಧಾರವಾಡ: ಲೋಕಸಭಾ ಚುನಾವಣೆ ನಂತರ ಕರ್ನಾಟಕದಲ್ಲಿಯೂ ಮಹಾರಾಷ್ಟ್ರದಲ್ಲಿ ನಡೆದಂತೆ ರಾಜಕೀಯ ಪಲ್ಲಟ ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಭವಿಷ್ಯ ನುಡಿದಿದ್ದಾರೆ.
ಧಾರವಾಡದಲ್ಲಿ ಬಿಜೆಪಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕೇವಲ ಒಂದು ವರ್ಷದಲ್ಲಿ ಕಾಂಗ್ರೆಸ್ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಖಜಾನೆಯಲ್ಲಿ ಹಣವಿಲ್ಲದಿದ್ದರಿಂದ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ ಕಾಂಗ್ರೆಸ್ ಅನುಷ್ಠಾನಕ್ಕೆ ಪರದಾಡುತ್ತಿದೆ. ಕಾಂಗ್ರೆಸ್ ಮುಖಂಡರ ಮಧ್ಯೆ ಜಗಳ ಶುರುವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಗೊಳ್ಳದಿದ್ದರಿಂದ ಹೊಸ ಸರಕಾರ ರಚನೆಯಾಗುವ ಸಾಧ್ಯತೆಯಿದೆ. ದೇಶದಲ್ಲಿ ಯಾವ ಗ್ಯಾರಂಟಿಗಳೂ ನಡೆಯುವುದಿಲ್ಲ. ಮೋದಿ ಗ್ಯಾರಂಟಿ ಮಾತ್ರ ನಡೆಯುತ್ತದೆ ಎಂದರು.