ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಲುಷಿತ ನೀರು ಕುಡಿದು 41 ಜನ ಅಸ್ವಸ್ಥ

07:30 PM Aug 13, 2024 IST | Samyukta Karnataka

ಬೆಳಗಾವಿ: ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಆರಂಭವಾದ ವಾಂತಿ ಭೇದಿ ಉಲ್ಬಣಗೊಂಡಿದೆ. ಒಂದೇ ದಿನ ೪೧ ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ.
ತೀವ್ರ ಅಸ್ವಸ್ಥರಾದ ಮೂವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ, ಮೂವರನ್ನು ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿತ್ರಾಣಗೊಂಡಿರುವ ಈರವ್ವ ಗಾಳಿಮಠ(೬೩) ಅವರನ್ನು ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಲಾಗಿದೆ. ಇನ್ನಿಬ್ಬರು ಒಳರೋಗಿಗಳಾಗಿ ದಾಖಲಾಗಿದ್ದಾರೆ. ಉಳಿದವರು ಚಚಡಿ ಹಾಗೂ ಇಂಚಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ ಕೋಣಿ ಭೇಟಿ ನೀಡಿ ತುರ್ತು ಚಿಕಿತ್ಸೆಯ ವ್ಯವಸ್ಥೆ ಮಾಡಿದರು. ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿ ಕಾಣಿಸಿಕೊಂಡಿದೆ. ಪ್ರಾಣಾಪಾಯ ಆಗಿಲ್ಲ. ನಿತ್ರಾಣಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಮುಂದುವರಿಸಲಾಗಿದೆ. ಗ್ರಾಮದಲ್ಲಿ ನಾಲ್ವರು ವೈದ್ಯರು ಹಾಗೂ ಹಲವು ವೈದ್ಯಕೀಯ ಸಿಬ್ಬಂದಿ ಸ್ಥಳದಲ್ಲೇ ಇದ್ದಾರೆ. ನೀರನ್ನು ಕುದಿಸಿ ೯೦% ಕುಡಿಯುವಂತೆ ಜಾಗೃತಿ ವಹಿಸಲಾಗಿದೆ. ಸವದತ್ತಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಯಶವಂತ ಕುಮಾರ್ ಮಾತನಾಡಿ, ಸಮಸ್ಯೆ ಉಲ್ಬಣವಾಗುತ್ತಿದ್ದಂತೆ ಎಚ್ಚರಿಕೆ ಕ್ರಮವಹಿಸಲಾಗಿದೆ. ಬೋರ್‌ವೆಲ್‌ಗಳ ಗ್ರಾಮದ ನೀರನ್ನು ತಪಾಸಣೆಗೆ ಕಳಿಸಲಾಗಿದೆ. ಗ್ರಾಮಕ್ಕೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗಿದೆ. ಓವರ್‌ಹೆಡ್ ಟ್ಯಾಂಕಿನಿಂದ ನೀರು ಸ್ಥಗಿತ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Tags :
#Belagaviwaterನೀರು
Next Article