ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಲುಷಿತ ನೀರು ಸೇವನೆ: ಮಹಿಳೆ ಬಲಿ

10:32 PM Jan 07, 2024 IST | Samyukta Karnataka

ಹೊಸಪೇಟೆ: ನಗರದ ಕಾರಿಗನೂರು ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿ ವಾಂತಿಬೇಧಿಗೆ ಮಹಿಳೆಯೊಬ್ಬರು ಭಾನುವಾರ ಮೃತಪಟ್ಟಿದ್ದಾರೆ.
ಕಾರಿಗನೂರಿನ ಆರ್ ಬಿಎಸ್ ಎಸ್ ಎನ್ ಕ್ಯಾಂಪ್ ನ ನಿವಾಸಿ ಸೀತಮ್ಮ (66) ಮೃತಪಟ್ಟ ಮಹಿಳೆ. ನಗರದ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಮೊದಲಿಗೆ ಚಿಕಿತ್ಸೆ ಪಡೆದಿದ್ದರು. ಬಳಿಕ ಬಳ್ಳಾರಿ ವಿಮ್ಸ್ ನಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾರಿಗನೂರು ಶಿಕಾರಿ ಕ್ಯಾಂಪ್, ಆರ್ ಬಿಎಸ್ ಎಸ್ ನ ಕ್ಯಾಂಪ್, ಕೊಟ್ಟೂರೇಶ್ವರ ನಗರ ಮತ್ತು ಹಂಪಿನಕಟ್ಟೆ ಪ್ರದೇಶದಲ್ಲಿ ೨೭ ವಾಂತಿಭೇದಿ ಪ್ರಕರಣಗಳು ಕಂಡು ಬಂದಿವೆ. ಕಲುಷಿತ ನೀರು ಸರಬರಾಜಿನಿಂದ ಈ ಸಮಸ್ಯೆ ಉಂಟಾಗಿತ್ತು. ಈ ಹಿಂದೆ ನಗರದ ರಾಣಿ ಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈಗ ಕಾರಿಗನೂರಿನಲ್ಲಿ ಮಹಿಳೆ ಮೃತಪಟ್ಟಿದ್ದು, ಆದರೂ ನಗರಸಭೆ ಎಚ್ಚೆತ್ತುಕೊಳ್ಳದೇ ಇರುವುದಕ್ಕೆ ನಗರದ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Next Article