For the best experience, open
https://m.samyuktakarnataka.in
on your mobile browser.

ಕಲುಷಿತ ನೀರು ಸೇವನೆ 1000ಕ್ಕೂ ಹೆಚ್ಚು ಮಂದಿ ಅಸ್ವಸ್ಥ

01:49 PM Oct 04, 2024 IST | Samyukta Karnataka
ಕಲುಷಿತ ನೀರು ಸೇವನೆ 1000ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಉಡುಪಿ: ಕಲುಷಿತ ನೀರು ಸೇವಿಸಿ ಒಂದು ಸಾವಿರಕ್ಕೂ ಅಧಿಕ ಮಂದಿ ವಾಂತಿ ಭೇದಿಯಿಂದ ಅಸ್ವಸ್ಥರಾದ ಘಟನೆ ನಡೆದಿದೆ,
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪಂದ ಗ್ರಾಮ ಪಂಚಾಯತನಲ್ಲಿ ಈ ಘಟನೆ ನಡೆದಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ 6ನೇ ಮತ್ತು 7ನೇ ವಾರ್ಡ್ನಲ್ಲಿ ಕುಡಿಯುವ ನೀರು ಸಂಪೂರ್ಣವಾಗಿ ಕಲುಷಿತಗೊಂಡ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕಲುಷಿತ ನೀರು ಸೇವಿಸಿದ ಕರ್ಕಿಹಳ್ಳಿ ಹಾಗೂ ಮೇಡಿಕಲ್ ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ ಕಾಫಿನಾಡಿಯ ಟ್ಯಾಂಕಿನಿಂದ ಕಲುಷಿತ ನೀರು ಪೂರೈಕೆ ಆಗಿದೆ ಎಂದು ಹೇಳಲಾಗುತ್ತಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಘಟನೆಯಿಂದ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ.

Tags :