ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ

08:08 PM May 19, 2024 IST | Samyukta Karnataka

ವಿಜಯಪುರ: ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ಎಪಿಎಂಸಿ ಮೇಕೆ ಹಾಗೂ ಕುರಿ ಮಾರುಕಟ್ಟೆಯಲ್ಲಿ ನಡೆದಿದೆ.
ನಗರದ ಕಂವಾರ ಓಣಿ ನಿವಾಸಿ ೨೨ ವರ್ಷದ ರೋಹಿತ್ ಸುಭಾಶ ಪವಾರ ಎಂಬ ಯುವಕನ ಮುಖ ಸೇರಿದಂತೆ ದೇಹದ ಇತರೆ ಭಾಗಗಳನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿ ಮುಳ್ಳುಕಂಟಿಯಲ್ಲಿ ಶವ ಬಿಸಾಡಿ ಹೋಗಿದ್ದಾರೆ.
ಸ್ಥಳದಲ್ಲಿ ಬಿಯರ್ ಬಾಟಲ್, ಚಿಪ್ಸ್ ಪ್ಯಾಕೇಟ್ ಪತ್ತೆಯಾಗಿದ್ದು, ಪರಿಚಿತರೇ ಕುಡಿದ ಮತ್ತಿನಲ್ಲಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ.
ರೋಹಿತ ಸ್ನೇಹಿತ ಖಾಲೀದ್ ಮನೆಗೆ ಹೋದರೂ ಅಲ್ಲಿಯೂ ರೋಹಿತ ಇರಲಿಲ್ಲ. ಹುಡುಕಾಡಿದಾಗ ಆತನ ಶವ ಎಪಿಎಂಸಿ ಆವರಣದಲ್ಲಿ ಕಂಡು ಬಂದಿದೆ. ಕುಟುಂಬಸ್ಥರಿಂದ ಎಪಿಎಂಸಿ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಡಿವೈಎಸ್ಪಿ ಬಸವರಾಜ ಯಲಿಗಾರ ಹಾಗೂ ಇತರೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Next Article