ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾಂಗ್ರೆಸ್‌ನವರು ಕರಿಮಣಿ ಮಾಲೀಕ ನಾನಲ್ಲಾ ಎನ್ನುತ್ತಿದ್ದಾರೆ

06:17 PM Mar 08, 2024 IST | Samyukta Karnataka

ಬೆಳಗಾವಿ: ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲ. ಚುನಾವಣೆಗೆ ಸ್ಪರ್ಧಿಸಿ ಎಂದರೆ ಕರಿಮಣಿ ಮಾಲೀಕ ನಾನಲ್ಲಾ ಎನ್ನುತ್ತಿದ್ದಾರೆ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವ್ಯಂಗ್ಯವಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಸಂಪಗಾಂವ ಗ್ರಾಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನಲ್ಲಿದ್ದ ಪದಾಧಿಕಾರಿಗಳು ಹೋಗಿ ನೀವು ನಿಲ್ಲಿರಿ ಅಂದರೆ ಕರಿಮನಿ ಮಾಲೀಕ ನಾನಲ್ಲಾ ಎಂದು ಹೇಳುತ್ತಾರೆ. ನಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸಲು ಯಾರು ಒಲ್ಲೆ ಎನ್ನುತ್ತಿದ್ದಾರೆ. ಕರಿಮಣಿ ಮಾಲೀಕ ನಾನಲ್ಲ ಎಂದು ಹೇಳುತ್ತಿದ್ದಾರೆ. ಆದರೂ ಯಾರಿಗಾದರೂ ಒಬ್ಬರಿಗೆ ಕರಿಮಣಿ ಕಟ್ಟಿಸುತ್ತಾರೆ ಬಿಡಿ ಎಂದು ವ್ಯಂಗ್ಯವಾಡಿದರು. ಮತ್ತೆ ಯಾರು ಸಿಗುವುದಿಲ್ಲಾ ಅಂತಾ ಖಾನಾಪುರದಲ್ಲಿ ರಿಜೆಕ್ಟೆಡ್ ಮಟೀರಿಯಲ್ ಇದೆ, ಅದನ್ನ ತಗೊಂಡ ಹೋಗಿ‌ ನಿಲ್ಲಿಸುತ್ತಾರೆ. ಖಾನಾಪುರದ ರಿಜೆಕ್ಟೆಡ್ ಮಟಿರಿಯಲ್ ನಮ್ಮ ಕ್ಷೇತ್ರದ ಅಭ್ಯರ್ಥಿ. ಖಾನಾಪುರದಿಂದ ಜನ ತಿರಸ್ಕಾರ ಮಾಡಿ ಓಡಿಸಿದ್ದಾರೆ, ಎಲ್ಲಾ ಅಡ್ಡಾಡಿಸುತ್ತಿದ್ದಾರೆ. ಸಿದ್ದರಾಮಯ್ಯನವರು ಕರೆದುಕೊಂಡು ಓಡಾಡುತ್ತಿದ್ದಾರೆ. ಯಾರೇ ಆಗಲಿ ಕಾಂಗ್ರೆಸ್​ಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದು ಖಾನಾಪುರ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

Next Article