For the best experience, open
https://m.samyuktakarnataka.in
on your mobile browser.

ಕಾಂಗ್ರೆಸ್ ಅಭ್ಯರ್ಥಿಯಾಗಿ ಅಭಿಷೇಕ್ ಮನು ಸಿಂಘ್ವಿ ನೇಮಕ

07:15 PM Aug 14, 2024 IST | Samyukta Karnataka
ಕಾಂಗ್ರೆಸ್ ಅಭ್ಯರ್ಥಿಯಾಗಿ ಅಭಿಷೇಕ್ ಮನು ಸಿಂಘ್ವಿ ನೇಮಕ

ನವದೆಹಲಿ: ತೆಲಂಗಾಣದಲ್ಲಿ ನಡೆಯಲಿರುವ ರಾಜ್ಯಸಭಾ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಹಿರಿಯ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರನ್ನು ಬುಧವಾರ ನಾಮನಿರ್ದೇಶನ ಮಾಡಿದೆ.

ಬಿಆರ್‌ಎಸ್‌ ಸಂಸದ ಕೆ.ಕೇಶವ ರಾವ್‌ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ ನಂತರ ಆ ಸ್ಥಾನ ತೆರವಾಗಿತ್ತು. ತೆಲಂಗಾಣದಿಂದ ರಾಜ್ಯಗಳ ಪರಿಷತ್ತಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಭಿಷೇಕ್ ಮನು ಸಿಂಘ್ವಿ ಅವರ ಉಮೇದುವಾರಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :