For the best experience, open
https://m.samyuktakarnataka.in
on your mobile browser.

ಕಾಂಗ್ರೆಸ್ ಕಚೇರಿಗೆ ಟಿಪ್ಪು ಹೆಸರು ಇಟ್ಟುಕೊಳ್ಳಿ

02:53 PM Dec 17, 2023 IST | Samyukta Karnataka
ಕಾಂಗ್ರೆಸ್ ಕಚೇರಿಗೆ ಟಿಪ್ಪು ಹೆಸರು ಇಟ್ಟುಕೊಳ್ಳಿ

ಚಿಕ್ಕಮಗಳೂರು: ಟಿಪ್ಪು ಹೆಸರಿಡುವುದಾದರೆ ಕಾಂಗ್ರೆಸ್ ಕಚೇರಿಗೆ ಇಟ್ಟುಕೊಳ್ಳಿ , ನಿಮ್ಮ ಮನೆಗೆ ಇಟ್ಟುಕೊಳ್ಳಿ ವಿಮಾನ ನಿಲ್ದಾಣಕ್ಕೆ ಅಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಪ್ರಸ್ತಾಪಕ್ಕೆ ಮಾಜಿ ಶಾಸಕ ಸಿ.ಟಿ ರವಿ ತೀಕ್ಷ್ಣವಾಗಿ ಪ್ರತಿಕ್ರಯಿಸಿದ್ದಾರೆ.
ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತಮಾಲೆ ಧರಿಸಿದ ನಂತರ ಮಾತನಾಡಿದ ಅವರು ಪ್ರಸಾದ್ ಅಬ್ಬಯ್ಯ ತಮ್ಮ ಮನೆಗೆ ಟಿಪ್ಪು ಹೆಸರಿಟ್ಟುಕೊಳ್ಳಲಿ ಕಾಂಗ್ರೆಸ್ ನವರಿಗೆ ಪ್ರೀತಿ ಇದ್ದರೆ ಕಾಂಗ್ರೆಸ್ ಕಚೇರಿಗಳಿಗೆ ಟಿಪ್ಪು ಹೆಸರಿಟ್ಟುಕೊಳ್ಳಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಬೇಡ ಎಂದು ಹೇಳಿದ್ದಾರೆ.
ಮೈಸೂರು ಸಂಸ್ಥಾನಕ್ಕೆ ಅಪಾರ ಕೊಡುಗೆ ಕೊಟ್ಟಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದು ಆಗ್ರಹಿಸಿರುವ ಅವರು, ಟಿಪ್ಪು ಹಿಂದುಗಳ ಮಾರಣಹೋಮ ನಡೆಸಿ ಕ್ರೈಸ್ತರ ನೆತ್ತರ ಕೋಡಿ ಹರಿಸಿದ್ದವನು ದೇವಾಲಯ ದ್ವಂಸಗೊಳಿಸಿ ದೌರ್ಜನ್ಯ ಎಸಗಿದ್ದಾನೆ ಕನ್ನಡ ಬಿಟ್ಟು ಪಾರ್ಸಿ ಭಾಷೆ ಹೇರಲು ಹುನ್ನಾರ ನಡೆಸಿದ್ದವನು ಟಿಪ್ಪು ಎಂದು ಹೇಳಿದ್ದಾರೆ