ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ

04:02 PM Oct 21, 2024 IST | Samyukta Karnataka

ಚಳ್ಳಕೆರೆ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡಿದರು.

ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 1000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲಿದೆ ಎಂದು ಯತ್ನಾಳ್ ಅವರು ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ ಹಣ, ಇದು ಕಪ್ಪು ಹಣ ಇರಬಹುದಲ್ಲವೇ. ಬಿಜೆಪಿಯವರು ಲಂಚದಿಂದ ಬರುವ ಈ ಕಪ್ಪು ಹಣ ಬಳಸಿ ಸರ್ಕಾರ ಉರುಳಿಸುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು.

ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಸಿ.ಪಿ.ಯೋಗೇಶ್ವರ್ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ಅವರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೊದಲು ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಜೆಡಿಎಸ್ ನವರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿ . ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಧ್ಯದಲ್ಲಿಯೇ ಆಯ್ಕೆ ಅಂತಿಮ ಗೊಳಿಸಲಾಗುವುದು ಎಂದರು.

ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

Tags :
#ಕಾಂಗ್ರೆಸ್‌#ಸಿದ್ದರಾಮಯ್ಯ
Next Article