ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾಂಗ್ರೆಸ್ ಭ್ರಷ್ಟಾಚಾರದ ಪೋಷಕತ್ವ ವಹಿಸಿದೆ ಎನ್ನಲು ಇದಕ್ಕಿಂತ ಪುರಾವೆ ಬೇಕೆ?

10:52 PM Sep 26, 2024 IST | Samyukta Karnataka

ಹುಬ್ಬಳ್ಳಿ: ಉಚ್ಚ ನ್ಯಾಯಾಲಯದ ತೀರ್ಪಿಗೆ ಪ್ರತಿಭಟನೆ ಮಾಡಿ ಅಗೌರವ ತೋರಿದ್ದಲ್ಲದೆ ಈಗ ಸಿಬಿಐ ಗೆ ತನಿಖೆ ಅನುಮತಿಯನ್ನು ಕೂಡ ರಾಜ್ಯ ಸರ್ಕಾರ ನಿಷೇಧಿಸಿದೆ. ತಾನು ನಿರಪರಾಧಿ ಯಾವ ತನಿಖೆಗಾದರೂ ನಾನು ಹೆದರುವುದಿಲ್ಲ ಎಂದು ಕೊಚ್ಚಿಕೊಳ್ಳುವ ನಿಮ್ಮ ಯು ಟರ್ನ್ ಏಕೆ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಸಿದ್ದರಾಮಯ್ಯನವರೇ ಸಂವಿಧಾನ ಎಂದು ಭಾಷಣ ಮಾಡುವ ನೀವು ಸಂವಿಧಾನ ಹಿಡಿದು ಪೋಸ್ ಕೊಡುವ ರಾಹುಲ್ ಗಾಂಧಿ, ಸಂವಿಧಾನದ ಸಂರಕ್ಷಕರಾದ ರಾಜ್ಯಪಾಲರ ಬಗ್ಗೆ ಯಾವ ರೀತಿ ನಡೆದುಕೊಳ್ಳುತ್ತಿದ್ದೀರಿ ಎಂದು ಕುಟುಕಿದ್ದಾರೆ. "ಭ್ರಷ್ಟಾಚಾರ ನಮ್ಮ ಹಕ್ಕು" ಇದು ಕಾಂಗ್ರೆಸ್ ಪಕ್ಷದ ಹೊಸ ಗ್ಯಾರಂಟಿಯೇ? ಎಂದು ಲೇವಡಿ ಮಾಡಿದ್ದಾರೆ.

Tags :
bjpcongresshubliprahlad joshi
Next Article